ಚುನಾವಣಾ ಬಹಿರಂಗ ಪ್ರಚಾರ ಅಂತ್ಯ – ಇನ್ನೇನಿದ್ದರೂ ಮನೆಮನೆಗೆ ತೆರಳಿ ಮತಯಾಚನೆ

May 9, 2023
7:31 AM

ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ, ಮುಂದಿನ ಲೋಕಸಭೆ ಚುನಾವಣೆ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿರುವ ಜಿದ್ದಾಜಿದ್ದಿನ ಅಖಾಡ ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election) ಮೊದಲ ಅಂಕಕ್ಕೆ ಇಂದು ತೆರೆ ಬಿದ್ದಿದೆ.

ಬುಧವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ (Campaign) ತೆರೆ ಬಿದ್ದಿದೆ. ಸ್ಥಳೀಯರಲ್ಲದ ನಾಯಕರು ಕ್ಷೇತ್ರಗಳನ್ನು ತೊರೆದರೆ ರಾಷ್ಟ್ರೀಯ ಮುಖಂಡರು ರಾಜ್ಯವನ್ನು ತೊರೆದಿದ್ದಾರೆ. ಇನ್ನು ಏನೇ ಇದ್ದರೂ ಮನೆ ಮನೆ ಪ್ರಚಾರದ ಆಟವಷ್ಟೇ ಬಾಕಿ ಉಳಿದಿದೆ.

ಚುನಾವಣಾ ಅಧಿಸೂಚನೆ ಹೊರಬಿದ್ದ ಮೇ 13ರಿಂದ ಇವತ್ತು ಸಂಜೆ 6 ಗಂಟೆಯವರೆಗೆ ಮತದಾರನ ಓಲೈಕೆಗಾಗಿ ಕೇಂದ್ರ, ರಾಜ್ಯ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದರು.

ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದು, ಮುಂದಿನ ಮೂರು ದಿನ ಮದ್ಯ ಸಿಗುವುದಿಲ್ಲ. ಸುಗಮ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಮಂಗಳವಾರ ಚುನಾವಣಾ ಸಿಬ್ಬಂದಿ ಮತಯಂತ್ರಗಳೊಂದಿಗೆ ನಿಗದಿತ ಮತಗಟ್ಟೆಗಳಿಗೆ ಎಂಟ್ರಿ ಕೊಡಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror