Advertisement
ಸುದ್ದಿಗಳು

ಚುನಾವಣಾ ಬಹಿರಂಗ ಪ್ರಚಾರ ಅಂತ್ಯ – ಇನ್ನೇನಿದ್ದರೂ ಮನೆಮನೆಗೆ ತೆರಳಿ ಮತಯಾಚನೆ

Share

ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ, ಮುಂದಿನ ಲೋಕಸಭೆ ಚುನಾವಣೆ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿರುವ ಜಿದ್ದಾಜಿದ್ದಿನ ಅಖಾಡ ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election) ಮೊದಲ ಅಂಕಕ್ಕೆ ಇಂದು ತೆರೆ ಬಿದ್ದಿದೆ.

ಬುಧವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ (Campaign) ತೆರೆ ಬಿದ್ದಿದೆ. ಸ್ಥಳೀಯರಲ್ಲದ ನಾಯಕರು ಕ್ಷೇತ್ರಗಳನ್ನು ತೊರೆದರೆ ರಾಷ್ಟ್ರೀಯ ಮುಖಂಡರು ರಾಜ್ಯವನ್ನು ತೊರೆದಿದ್ದಾರೆ. ಇನ್ನು ಏನೇ ಇದ್ದರೂ ಮನೆ ಮನೆ ಪ್ರಚಾರದ ಆಟವಷ್ಟೇ ಬಾಕಿ ಉಳಿದಿದೆ.

ಚುನಾವಣಾ ಅಧಿಸೂಚನೆ ಹೊರಬಿದ್ದ ಮೇ 13ರಿಂದ ಇವತ್ತು ಸಂಜೆ 6 ಗಂಟೆಯವರೆಗೆ ಮತದಾರನ ಓಲೈಕೆಗಾಗಿ ಕೇಂದ್ರ, ರಾಜ್ಯ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದರು.

ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದು, ಮುಂದಿನ ಮೂರು ದಿನ ಮದ್ಯ ಸಿಗುವುದಿಲ್ಲ. ಸುಗಮ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಮಂಗಳವಾರ ಚುನಾವಣಾ ಸಿಬ್ಬಂದಿ ಮತಯಂತ್ರಗಳೊಂದಿಗೆ ನಿಗದಿತ ಮತಗಟ್ಟೆಗಳಿಗೆ ಎಂಟ್ರಿ ಕೊಡಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

3 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

12 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

18 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

18 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago