Advertisement
ಸುದ್ದಿಗಳು

ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ

Share

2023ರ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್‌ ಮಾಡಿರುವ ಬಿಜೆಪಿ ಮೋದಿ ಮೂಲಕ ಮತ ಕಬ್ಜಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್‍ಡಿಕೆ ಅಡ್ಡಾಗೆ ಪ್ರಧಾನಿ ಮೋದಿ ಕರೆತರುವ ಮೂಲಕ ಜೆಡಿಎಸ್  ಭದ್ರಕೋಟೆಯನ್ನು ಛಿದ್ರ ಮಾಡಲು ಬಿಜೆಪಿ ಮಾಸ್ಟರ್ ಫ್ಲಾನ್ ಮಾಡಿದೆ. ಬೊಂಬೆನಗರಿ ಚನ್ನಪಟ್ಟಣದಲ್ಲಿ ಬೃಹತ್ ಪ್ರಚಾರ ಸಭೆ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ.

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದ ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಅದರ ಮುಂದುವರಿದ ಭಾಗವಾಗಿ ಮಂಡ್ಯ, ರಾಮನಗರ ಜಿಲ್ಲೆಗಳನ್ನೊಳಗೊಂಡಂತೆ 10ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಏ. 30ರಂದು ಚನ್ನಪಟ್ಟಣದಲ್ಲಿ ಬೃಹತ್ ಬಹಿರಂಗ ಸಮಾವೇಶ ಆಯೋಜನೆಗೆ ಬಿಜೆಪಿ ಸಿದ್ಧತೆ ನಡೆಸಿದೆ. ಸುಮಾರು 2 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ಮೂಲಕ ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಲಿದೆ. ಈ ಬೃಹತ್ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಎದುರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪರ್ಧೆ ಮಾಡಿರುವ ಹಿನ್ನಲೆಯಲ್ಲಿ ಮೋದಿ ಆಗಮನ ಸಿಪಿವೈಗೆ ಮತ್ತಷ್ಟು ಬಲನೀಡಲಿದೆ. ಈ ಮೂಲಕ ಹೆಚ್‍ಡಿಕೆ ಮಣಿಸುವ ಕಾರ್ಯತಂತ್ರವನ್ನು ಬಿಜೆಪಿ ಮಾಡುತ್ತಿದೆ. ಅಲ್ಲದೇ ಮೋದಿ ಮೂಲಕ ಹಿಂದೂ ಮತಗಳ ಕ್ರೂಢೀಕರಿಸಿ ಚನ್ನಪಟ್ಟಣದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ.

ಪ್ರಧಾನಿ ಮೋದಿ ಬಹಿರಂಗ ಸಮಾವೇಶಕ್ಕೆ ಚನ್ನಪಟ್ಟಣದ ಹೊರವಲಯದಲ್ಲಿ ಸುಮಾರು 30 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೋದಿ ಆಗಮನದಿಂದ ಹಳೇ ಮೈಸೂರು ಭಾಗದ ಬಿಜೆಪಿ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

12 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

21 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

22 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago