2023ರ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿರುವ ಬಿಜೆಪಿ ಮೋದಿ ಮೂಲಕ ಮತ ಕಬ್ಜಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಡಿಕೆ ಅಡ್ಡಾಗೆ ಪ್ರಧಾನಿ ಮೋದಿ ಕರೆತರುವ ಮೂಲಕ ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡಲು ಬಿಜೆಪಿ ಮಾಸ್ಟರ್ ಫ್ಲಾನ್ ಮಾಡಿದೆ. ಬೊಂಬೆನಗರಿ ಚನ್ನಪಟ್ಟಣದಲ್ಲಿ ಬೃಹತ್ ಪ್ರಚಾರ ಸಭೆ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ.
2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದ ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಅದರ ಮುಂದುವರಿದ ಭಾಗವಾಗಿ ಮಂಡ್ಯ, ರಾಮನಗರ ಜಿಲ್ಲೆಗಳನ್ನೊಳಗೊಂಡಂತೆ 10ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಏ. 30ರಂದು ಚನ್ನಪಟ್ಟಣದಲ್ಲಿ ಬೃಹತ್ ಬಹಿರಂಗ ಸಮಾವೇಶ ಆಯೋಜನೆಗೆ ಬಿಜೆಪಿ ಸಿದ್ಧತೆ ನಡೆಸಿದೆ. ಸುಮಾರು 2 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ಮೂಲಕ ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಲಿದೆ. ಈ ಬೃಹತ್ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಎದುರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪರ್ಧೆ ಮಾಡಿರುವ ಹಿನ್ನಲೆಯಲ್ಲಿ ಮೋದಿ ಆಗಮನ ಸಿಪಿವೈಗೆ ಮತ್ತಷ್ಟು ಬಲನೀಡಲಿದೆ. ಈ ಮೂಲಕ ಹೆಚ್ಡಿಕೆ ಮಣಿಸುವ ಕಾರ್ಯತಂತ್ರವನ್ನು ಬಿಜೆಪಿ ಮಾಡುತ್ತಿದೆ. ಅಲ್ಲದೇ ಮೋದಿ ಮೂಲಕ ಹಿಂದೂ ಮತಗಳ ಕ್ರೂಢೀಕರಿಸಿ ಚನ್ನಪಟ್ಟಣದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ.
ಪ್ರಧಾನಿ ಮೋದಿ ಬಹಿರಂಗ ಸಮಾವೇಶಕ್ಕೆ ಚನ್ನಪಟ್ಟಣದ ಹೊರವಲಯದಲ್ಲಿ ಸುಮಾರು 30 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೋದಿ ಆಗಮನದಿಂದ ಹಳೇ ಮೈಸೂರು ಭಾಗದ ಬಿಜೆಪಿ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…