ಸುದ್ದಿಗಳು

ಹನುಮಂತನಿಗೆ ಉಪದ್ರ ಮಾಡಿದ್ದಕ್ಕೆ ಹೆಲಿಕಾಪ್ಟರ್​​ ಗ್ಲಾಸ್​ ಹೋಯ್ತು : ಮತ್ತೆ ತಂಟೆಗೆ ಬಂದ್ರೆ ಮಿಸ್ಟರ್​​ ಡಿಕೆಶಿ ನೀವೂ ಪತನವಾಗಲಿದ್ದೀರಿ- ಯತ್ನಾಳ್​

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹನುಮಂತನ ಸುದ್ದಿಗೆ ಬಂದಿದ್ದಕ್ಕೆ ಹೆಲಿಕಾಪ್ಟರ್​ ಗ್ಲಾಸ್ ಪುಡಿಪುಡಿಯಾಗಿದೆ, ಮುಂದೆ ತಂಟೆಗೆ ಬಂದರೆ ಡಿಕೆ ಶಿವಕುಮಾರ್ ಅವರೇ ನೀವೂ ಪತನವಾಗಲಿದ್ದೀರಿ ಎಂದು ಬಿಜೆಪಿ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಕಿವಿಮಾತು ಹೇಳಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ಇನ್ನೊಂದು ಸಲ ಹುಟ್ಟಿ ಬಂದರೂ ಬಜರಂಗದಳವನ್ನು ಬ್ಯಾನ್ ಮಾಡಲು ಸಾಧ್ಯ ಇಲ್ಲ. ಬಜರಂಗದಳದವರು ಭಯೋತ್ಪಾದಕರಲ್ಲ, ದೇಶ ವಿರೋಧಿ ಚಟುವಟಿಕೆ ಮಾಡುವುದಿಲ್ಲ. ಬಜರಂಗದಳ ಎಂದರೆ ಗಂಗಾವತಿ ಎಂದು ಯತ್ನಾಳ್ ಹೇಳಿದಾಗ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಅಲ್ಲದೆ, ಭಾರತದ ರಾಮ ಮೋದಿ, ಹನುಮ ಯೋಗಿ, ಲಕ್ಷ್ಮಣ ಅಮಿತ್ ಶಾ. ಬಜರಂಗದಳ ನಿಷೇಧ ಮಾಡೋರನ್ನು ತಿಹಾರ ಜೈಲಿಗೆ ಕಳುಹಿಸೋಣ ಎಂದು ಯತ್ನಾಳ್ ಹೇಳಿದರು.

Advertisement

ಭಾಷಣದುದ್ದಕ್ಕೂ ಯತ್ನಾಳ್ ಅವರು ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಪ್ರಚಾರದಲ್ಲಿನ ಹೇಳಿಕೆಗಳನ್ನು ಮುಂದಿಟ್ಟುಕೊಂಡು ಮಿಮಿಕ್ ಮಾಡುತ್ತಾ ಟಾಂಗ್ ಕೊಟ್ಟರು. ಕಾಂಗ್ರೆಸ್ ಸೋಲಿಸಲು ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಇಬ್ಬರೇ ಸಾಕು. ರಾಹುಲ್ ಗಾಂಧಿ ಕಾಲಿಟ್ಟಲ್ಲಿ ಕಾಂಗ್ರೆಸ್ ಢಂ. ಇನ್ನು ಸಿದ್ದರಾಮಯ್ಯ ಅವರು ಪ್ರಚಾರಕ್ಕೆ ಹೋದಲ್ಲೆಲ್ಲಾ ಬಿಜೆಪಿ ಪರ ಪ್ರಚಾರ ನಡೆಸುತ್ತಾರೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಅವರ ಭಾಷಣವನ್ನು ಯತ್ನಾಳ್ ಅವರು ಮಿಮಿಕ್ ಮಾಡಿದರು. “10 ಕೆಜಿ ಅಕ್ಕಿ ರೂಪಾಯಿ, ಸಂತೋಷ ಆಯ್ತಾ?, ಎಲ್ಲಾ ವೋಟ್ ಹಾಕುತ್ತೀರಲ್ಲ?, ನಿಮ್ಮ ಮನೆಯವರನ್ನೆಲ್ಲಾ ವೋಟ್ ಮಾಡಿಸುತ್ತೀರಲ್ವಾ?, ಹಾಗಾದರೆ ಬಿಜೆಪಿಗೆ ವೋಟ್ ಹಾಕಿ” ಎಂದು ಪ್ರಚಾರದ ವೇಳೆ ಸಿದ್ದರಾಮಯ್ಯ ಹೇಳುತ್ತಾರೆ. ತನ್ನನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಖಾತ್ರಿಯಾಗಿದೆ. ತಿಹಾರ್ ಜೈಲಿಗೆ ಹೋದವರನ್ನು (ಡಿಕೆ ಶಿವಕುಮಾರ್) ಸಿಎಂ ಮಾಡುತ್ತಾರೆ, ಯಾಕೆಂದರೆ ಸೋನಿಯಾ ಗಾಂಧಿಗೆ ದಿನಾಲು ಪೇಮೆಂಟ್ ಕೊಡಬೇಕಲ್ಲ. ಹೀಗಾಗಿ ಸಿದ್ದರಾಮಯ್ಯ ಅವರು ನಿರ್ಣಯ ಮಾಡಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಗ್ಯಾರಂಟಿ ಗ್ಯಾರಂಟಿ ಏನ್ ಗ್ಯಾರಂಟಿ ಎಂದು ವ್ಯಂಗ್ಯವಾಡಿದ ಯತ್ನಾಳ್

ಕಾಂಗ್ರೆಸ್​ನ ಗ್ಯಾರಂಟಿ ಘೋಷಣೆಗಳ ಬಗ್ಗೆ ವ್ಯಂಗ್ಯವಾಡಿದ ಯತ್ನಾಳ್, ಗ್ಯಾರಂಟಿ.. ಗ್ಯಾರಂಟಿ.. ಏನ್ ಗ್ಯಾರಂಟಿ? ಟಿಕೆಟ್​ಗಾಗಿ 2ಲಕ್ಷ ತಗೊಂಡು ವಾಪಸ್ ಕೊಟ್ಟಿಲ್ಲ ಇವರು. ಒಂದೊಂದು ಕ್ಷೇತ್ರದಿಂದ 10-15 ಆಕಾಂಕ್ಷಿಗಳಿಗೆ ತಲಾ 2 ಲಕ್ಷ ಪಡೆದು ಕೊನೆಗೆ ಟಿಕೆಟ್ ನೀಡದಿದ್ದಾಗ ಹಣ ವಾಪಸ್ ಕೊಡಬೇಕಿತ್ತು. ಆದರೆ ಇವರು ಹಣವನ್ನೇ ವಾಪಸ್ ಕೊಟ್ಟಿಲ್ಲ. ಹೀಗಿದ್ದಾಗ ಇವರ ಗ್ಯಾರಂಟಿ ತಗೊಂಡು ನಾವೇನು ಮಾಡಬೇಕು ಎಂದು ವ್ಯಂಗ್ಯವಾಡಿದರು.

ಡಿಕೆ ಶಿವಕುಮಾರ್ ಹೇಳಿಕೆ ಮಿಮಿಕ್ ಮಾಡಿದ ಯತ್ನಾಳ್

ಸೋನಿಯಾ ಗಾಂಧಿಯನ್ನು ವಿಷಕನ್ಯೆ ಎಂದು ಯತ್ನಾಳ್ ಹೇಳಿದ್ದರು. ಇದನ್ನು ಡಿಕೆ ಶಿವಕುಮಾರ್ ಖಂಡಿಸುವ ವೇಳೆ ಸೋನಿಯಾ ಗಾಂಧಿ ಅವರನ್ನು ತನ್ನ ತಾಯಿ ಸಂಬೋಧಿಸಿದ್ದರು. ಇದನ್ನೇ ಮುಂದಿಟ್ಟುಕೊಂಡು ಡಿಕೆ ಶಿವಕುಮಾರ್ ಧಾಟಿಯಲ್ಲಿ ಮಾತನಾಡಿದ ಯತ್ನಾಳ್, “ಮಿಸ್ಟರ್ ಯತ್ನಾಳ್, ನೀವು ನನ್ನ ತಾಯಿಗೆ ಬೈದಿದ್ದೀರಿ” ಎಂದು ಡಿಕೆ ಶಿವಕುಮಾರ್ ಹೇಳುತ್ತಾರೆ, ಅವರಿಗೆ ಸೋನಿಯಾ ತಾಯಿ ಹೇಗೆ ಆಗುತ್ತಾರೆ? ನಿಮ್ಮ ತಾಯಿ ಕನಕಪುರದಲ್ಲಿದ್ದಾರೆ ಗೌರವ ಕೊಡೋಣ ಎಂದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |

ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…

5 hours ago

ಬದುಕು ಪುರಾಣ | ಅದು ‘ಎಚ್ಚರ’ದ ರೇಖೆ!

ಬದುಕಿನ ಯಾನಕ್ಕೆ ಪಾಲಕರು ರೇಖೆಯನ್ನು ಎಳೆದು ತೋರಿಸುತ್ತಾರೆ. ಅದು ಭವಿಷ್ಯದ ಕೈತಾಂಗು. ರಕ್ಷಣೆ…

7 hours ago

ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |

ಹನುಮಸಾಗರ ಗ್ರಾಮದ ಏಳು ವರ್ಷದ ಪ್ರದ್ವಿಕಾ ಕಣ್ಣಿಗೆ ಬಟ್ಟೆ ಕಟ್ಟಿ6 ನಿಮಿಷದಲ್ಲಿ 112…

7 hours ago

ಸಾರ್ವಜನಿಕರಲ್ಲಿ ಮಲೇರಿಯಾ ಕುರಿತು ಅರಿವು ಮೂಡಿಸಲು ಜಾಗೃತಿ

ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ…

8 hours ago

50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ

ಜಾಗತಿಕರಣದ ಆಕ್ರಮಣದಿಂದ ಜನಸಮುದಾಯಗಳ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಪರಿಣಾಮಕಾರಿ ಪ್ರಯತ್ನ…

8 hours ago

ಯುದ್ಧ……

ಅವಶ್ಯವಾದರೆ ದೇಶದ ರಕ್ಷಣೆಗಾಗಿ ಯಾವ ತ್ಯಾಗಕ್ಕಾದರೂ ಸಿದ್ದರಾಗೋಣ. ಆದರೆ ಹುಚ್ಚುತನದ ಭಾವನಾತ್ಮಕ ಅಭಿಪ್ರಾಯಗಳಿಗೆ…

8 hours ago