ಅವಹೇಳನಕಾರ ಹೇಳಿಕೆ : ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್

May 3, 2023
11:28 PM

ಚುನಾವಣಾ ಪ್ರಚಾರ ಸಭೆಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರವಾಗಿ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸವನ ಪಾಟೀಲ್ ಯತ್ನಾಳ್ ಹಾಗೂ ಚಿತ್ತಾಪುರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ. ಇದೀಗ ಇಬ್ಬರೂ ನಾಯಕರು ಆಯೋಗಕ್ಕೆ ಕಾರಣ ನೀಡಬೇಕಿದೆ. ಯತ್ನಾಳ್ ಅವರು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಸಿ ಟೀಕಿಸಿದ್ದರೆ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಪದ ಬಳಸಿ ಟೀಕಿಸಿದ್ದರು.

ಮೇ 4ರ ಸಂಜೆ 5 ಗಂಟೆಯೊಳಗೆ ಉತ್ತರ ನೀಡುವಂತೆ ಇಬ್ಬರಿಗೂ ಆಯೋಗ ಸೂಚಿಸಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ನೋಟಿಸ್ ನೀಡಲಾಗಿದೆ. ನೀತಿ ಸಂಹಿತೆ ಪ್ರಕಾರ, ರಾಜಕೀಯ ವಿರೋಧಿಗಳ ವೈಯಕ್ತಿಕ ತೇಜೋವಧೆ ಮಾಡುವಂತಿಲ್ಲ. ಹೀಗಾಗಿ ನಿಮ್ಮ ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು ಎಂದು ಇಬ್ಬರೂ ನಾಯಕರನ್ನು ಆಯೋಗ ಪ್ರಶ್ನಿಸಿದೆ.

Advertisement

ಪ್ರಚಾರದ ವೇಳೆ ನಾಯಕರು ಭಾಷೆಯ ಘನತೆಯನ್ನು ಮರೆಯುತ್ತಿರುವುದು ಹಲವು ಬಾರಿ ಕಂಡು ಬಂದಿದೆ ಎಂದು ಮಂಗಳವಾರ ಹೇಳಿದ್ದ ಚುನಾವಣಾ ಆಯೋಗ, ನಾಯಕರ ಅವಹೇಳನಕಾರಿ ಹೇಳಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸ್ಟಾರ್ ಪ್ರಚಾರಕರು ಮತ್ತು ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror