ಚುನಾವಣಾ ಪ್ರಚಾರ ಸಭೆಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರವಾಗಿ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸವನ ಪಾಟೀಲ್ ಯತ್ನಾಳ್ ಹಾಗೂ ಚಿತ್ತಾಪುರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ. ಇದೀಗ ಇಬ್ಬರೂ ನಾಯಕರು ಆಯೋಗಕ್ಕೆ ಕಾರಣ ನೀಡಬೇಕಿದೆ. ಯತ್ನಾಳ್ ಅವರು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಸಿ ಟೀಕಿಸಿದ್ದರೆ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಪದ ಬಳಸಿ ಟೀಕಿಸಿದ್ದರು.
ಮೇ 4ರ ಸಂಜೆ 5 ಗಂಟೆಯೊಳಗೆ ಉತ್ತರ ನೀಡುವಂತೆ ಇಬ್ಬರಿಗೂ ಆಯೋಗ ಸೂಚಿಸಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ನೋಟಿಸ್ ನೀಡಲಾಗಿದೆ. ನೀತಿ ಸಂಹಿತೆ ಪ್ರಕಾರ, ರಾಜಕೀಯ ವಿರೋಧಿಗಳ ವೈಯಕ್ತಿಕ ತೇಜೋವಧೆ ಮಾಡುವಂತಿಲ್ಲ. ಹೀಗಾಗಿ ನಿಮ್ಮ ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು ಎಂದು ಇಬ್ಬರೂ ನಾಯಕರನ್ನು ಆಯೋಗ ಪ್ರಶ್ನಿಸಿದೆ.
ಪ್ರಚಾರದ ವೇಳೆ ನಾಯಕರು ಭಾಷೆಯ ಘನತೆಯನ್ನು ಮರೆಯುತ್ತಿರುವುದು ಹಲವು ಬಾರಿ ಕಂಡು ಬಂದಿದೆ ಎಂದು ಮಂಗಳವಾರ ಹೇಳಿದ್ದ ಚುನಾವಣಾ ಆಯೋಗ, ನಾಯಕರ ಅವಹೇಳನಕಾರಿ ಹೇಳಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸ್ಟಾರ್ ಪ್ರಚಾರಕರು ಮತ್ತು ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…