ಚುನಾವಣಾ ಪ್ರಚಾರ ಸಭೆಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರವಾಗಿ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸವನ ಪಾಟೀಲ್ ಯತ್ನಾಳ್ ಹಾಗೂ ಚಿತ್ತಾಪುರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ. ಇದೀಗ ಇಬ್ಬರೂ ನಾಯಕರು ಆಯೋಗಕ್ಕೆ ಕಾರಣ ನೀಡಬೇಕಿದೆ. ಯತ್ನಾಳ್ ಅವರು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಸಿ ಟೀಕಿಸಿದ್ದರೆ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಪದ ಬಳಸಿ ಟೀಕಿಸಿದ್ದರು.
ಮೇ 4ರ ಸಂಜೆ 5 ಗಂಟೆಯೊಳಗೆ ಉತ್ತರ ನೀಡುವಂತೆ ಇಬ್ಬರಿಗೂ ಆಯೋಗ ಸೂಚಿಸಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ನೋಟಿಸ್ ನೀಡಲಾಗಿದೆ. ನೀತಿ ಸಂಹಿತೆ ಪ್ರಕಾರ, ರಾಜಕೀಯ ವಿರೋಧಿಗಳ ವೈಯಕ್ತಿಕ ತೇಜೋವಧೆ ಮಾಡುವಂತಿಲ್ಲ. ಹೀಗಾಗಿ ನಿಮ್ಮ ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು ಎಂದು ಇಬ್ಬರೂ ನಾಯಕರನ್ನು ಆಯೋಗ ಪ್ರಶ್ನಿಸಿದೆ.
ಪ್ರಚಾರದ ವೇಳೆ ನಾಯಕರು ಭಾಷೆಯ ಘನತೆಯನ್ನು ಮರೆಯುತ್ತಿರುವುದು ಹಲವು ಬಾರಿ ಕಂಡು ಬಂದಿದೆ ಎಂದು ಮಂಗಳವಾರ ಹೇಳಿದ್ದ ಚುನಾವಣಾ ಆಯೋಗ, ನಾಯಕರ ಅವಹೇಳನಕಾರಿ ಹೇಳಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸ್ಟಾರ್ ಪ್ರಚಾರಕರು ಮತ್ತು ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…