ಚುನಾವಣಾ ಪ್ರಚಾರ ಸಭೆಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರವಾಗಿ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸವನ ಪಾಟೀಲ್ ಯತ್ನಾಳ್ ಹಾಗೂ ಚಿತ್ತಾಪುರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ. ಇದೀಗ ಇಬ್ಬರೂ ನಾಯಕರು ಆಯೋಗಕ್ಕೆ ಕಾರಣ ನೀಡಬೇಕಿದೆ. ಯತ್ನಾಳ್ ಅವರು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಸಿ ಟೀಕಿಸಿದ್ದರೆ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಪದ ಬಳಸಿ ಟೀಕಿಸಿದ್ದರು.
ಮೇ 4ರ ಸಂಜೆ 5 ಗಂಟೆಯೊಳಗೆ ಉತ್ತರ ನೀಡುವಂತೆ ಇಬ್ಬರಿಗೂ ಆಯೋಗ ಸೂಚಿಸಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ನೋಟಿಸ್ ನೀಡಲಾಗಿದೆ. ನೀತಿ ಸಂಹಿತೆ ಪ್ರಕಾರ, ರಾಜಕೀಯ ವಿರೋಧಿಗಳ ವೈಯಕ್ತಿಕ ತೇಜೋವಧೆ ಮಾಡುವಂತಿಲ್ಲ. ಹೀಗಾಗಿ ನಿಮ್ಮ ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು ಎಂದು ಇಬ್ಬರೂ ನಾಯಕರನ್ನು ಆಯೋಗ ಪ್ರಶ್ನಿಸಿದೆ.
ಪ್ರಚಾರದ ವೇಳೆ ನಾಯಕರು ಭಾಷೆಯ ಘನತೆಯನ್ನು ಮರೆಯುತ್ತಿರುವುದು ಹಲವು ಬಾರಿ ಕಂಡು ಬಂದಿದೆ ಎಂದು ಮಂಗಳವಾರ ಹೇಳಿದ್ದ ಚುನಾವಣಾ ಆಯೋಗ, ನಾಯಕರ ಅವಹೇಳನಕಾರಿ ಹೇಳಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸ್ಟಾರ್ ಪ್ರಚಾರಕರು ಮತ್ತು ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…