ಕರ್ನಾಟಕದಲ್ಲಿ ಮತ್ತೆ ಮೋದಿ ಮೇನಿಯಾ ಶುರುವಾಗಿದೆ. ರಾಜಕೀಯ ಕುರುಕ್ಷೇತ್ರದ ಕಾವನ್ನ ಮತ್ತಷ್ಟು ಕೆಂಪೇರಿಸಲು ನಾಳೆಯಿಂದ ಬಿಜೆಪಿಯ ಟಾಸ್ಕ್ ಮಾಸ್ಟರ್, ಗೇಮ್ ಚೇಂಜರ್ ಪ್ರಧಾನಿ ಮೋದಿಯವರ ಎಂಟ್ರಿ ಆಗ್ತಿದೆ.
ಏಪ್ರಿಲ್ 29 ಅಂದ್ರೆ ಇಂದು ಬೆಳಗ್ಗೆ 11ಕ್ಕೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಆಗಮಿಸಲಿರುವ ಮೋದಿ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ವಿಜಯಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಬೇಟೆಯಾಡಲಿದ್ದಾರೆ. ಬಳಿಕ ಮಧ್ಯಾಹ್ನ 3.30ಕ್ಕೆ ಬೆಳಗಾವಿಯ ಕುಡಚಿ ಕ್ಷೇತ್ರದಲ್ಲಿ ಪಿ. ರಾಜೀವ್ ಪರ ಮೋದಿ ಕ್ಯಾಂಪೇನ್ ಮಾಡಲಿದ್ದು, ಸಂಜೆ 6ಕ್ಕೆ ಬೆಳಗಾವಿಯಿಂದ ಬೆಂಗಳೂರಿಗೆ ಬರಲಿರುವ ಮೋದಿ, ನೈಸ್ ರೋಡ್ನಿಂದ ಸುಮ್ಮನಹಳ್ಳಿ ಜಂಕ್ಷನ್ವರೆಗೆ ಬೃಹತ್ ರೋಡ್ ಶೋ ನಡೆಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಭಾನುವಾರ ಬೆಂಗಳೂರಿನಿಂದ ಕೋಲಾರಕ್ಕೆ ತೆರಳಲಿರುವ ಮೋದಿ, ಬೆಳಗ್ಗೆ 11ಕ್ಕೆ ಕೋಲಾರದ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.. ಮಧ್ಯಾಹ್ನ 2ಗಂಟೆಗೆ ಕುಮಾರಸ್ವಾಮಿ ಕರ್ಮಭೂಮಿ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಪರ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬೇಲೂರಿನಲ್ಲಿ ಸಮಾವೇಶ ಮುಗಿಸಿ ಸಂಜೆ 5.30ಕ್ಕೆ ಮೈಸೂರಿಗೆ ಆಗಮಿಸಲಿರುವ ಮೋದಿ ವಿದ್ಯಾಪೀಠ ಸರ್ಕಲ್ನಿಂದ ಬನ್ನಿಮಂಟಪದ ವರೆಗೆ ರೋಡ್ ಶೋ ನಡೆಸಲಿದ್ದಾರೆ. ಬಳಿಕ ದೆಹಲಿಗೆ ತೆರಳಲಿದ್ದಾರೆ.
ಮೋದಿ ಸಮಾವೇಶಕ್ಕಾಗಿ ವಿಜಯಪುರದ ಸೈನಿಕ ಶಾಲೆಯಲ್ಲಿ 340 ಅಡಿ ಅಗಲದ ಬೃಹತ್ ವೇದಿಕೆ ನಿರ್ಮಾಣ ಮಾಡಿದ್ದು, 80,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ 9 ಮತಕ್ಷೇತ್ರಗಳಿಂದ 2 ಲಕ್ಷ ಜನರನ್ನ ಕರೆತರುವ ಪ್ಲ್ಯಾನ್ ಮಾಡಲಾಗಿದೆ.
ಬೆಳಗ್ಗೆ 11 ಗಂಟೆಗೆ ಮಡಿಕೇರಿಯಲ್ಲಿ ಅಮಿತ್ ಶಾ ರೋಡ್ಶೋ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಉಡುಪಿ ಕ್ಷೇತ್ರದ ಕಟಪಾಡಿಯಲ್ಲಿ ಉಡುಪಿ, ಕಾಪು ಕ್ಷೇತ್ರದ ಕಾರ್ಯಕರ್ತರನ್ನೊಳಗೊಂಡ ಪ್ರಚಾರ ಸಭೆ ನಡೆಯಲಿದೆ. ಸಂಜೆ 4ಕ್ಕೆ ಬೈಂದೂರಿನಲ್ಲಿ ಅಮಿತ್ ಶಾ ರೋಡ್ ಶೋ, ಪ್ರಚಾರ ಸಭೆ ನಡೆಸಲಿದ್ದಾರೆ. ಸಂಜೆ 5.30ಕ್ಕೆ ಮಂಗಳೂರಿನಲ್ಲಿ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿ ನಂತರ ಕ್ಲಾಕ್ಟವರ್ನಿಂದ ಗೋವಿಂದ ಪೈ ವೃತ್ತದವರೆಗೆ ಪ್ರಚಾರ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಮಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪ್ರಮುಖ ಸಭೆ ನಡೆಸಿ ರಾತ್ರಿ 8.50ಕ್ಕೆ ಮಂಗಳೂರಿನಿಂದ ದೆಹಲಿಗೆ ತೆರಳಲಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ನೆಹರು ಮೈದಾನದಲ್ಲಿ ಮಧ್ಯಾಹ್ನ 3ಕ್ಕೆ ಬಹಿರಂಗ ಸಭೆ ನಡೆಯಲಿದ್ದು ಸ್ಮೃತಿ ಇರಾನಿ ಭಾಗಿಯಾಗಲಿದ್ದಾರೆ. ಹಾಘೂ ಹಿರಿಯೂರು ಬಿಜೆಪಿ ಅಬ್ಯರ್ಥಿ ಪೂರ್ಣಿಮಾ ಪರ ಮತಯಾಚನೆ ಮಾಡಲಿದ್ದಾರೆ. ಎಪ್ರಿಲ್ 26ರಂದು ಹಿರಿಯೂರಿಗೆ ಪ್ರಿಯಾಂಕಾ ಗಾಂಧಿ ಆಗಮಿಸಿದ್ದರು. ಕಾಂಗ್ರೆಸ್ ಅಬ್ಯರ್ಥಿ ಡಿ.ಸುಧಾಕರ್ ಪರ ರೋಡ್ ಶೋ ನಡೆಸಿದ್ದರು. ಪ್ರಿಯಾಂಕಾ ಗಾಂಧಿ ಪ್ರಚಾರದ ಬೆನ್ನಲ್ಲೇ ಸ್ಮೃತಿ ಇರಾನಿ ಆಗಮಿಸಿದ್ದು ಸ್ಮೃತಿ ಪ್ರಚಾರದ ಮೂಲಕ ಮಹಿಳಾ ಮತ ಸೆಳೆಯಲು ಬಿಜೆಪಿ ಪ್ಲಾನ್ ಮಾಡಿದೆ. ಪ್ರಿಯಾಂಕಾ ಗಾಂಧಿಗೆ ಕೌಂಟರ್ ಕೊಡಲು ಬಿಜೆಪಿ ಸಜ್ಜಾಗಿದೆ.
ಇಂದು ಬೆಳಗ್ಗೆ 11.15ಕ್ಕೆ ಮಂಡಕಳ್ಳಿ ಏರ್ಪೋರ್ಟ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸುವ ರಾಜನಾಥ್ ಸಿಂಗ್, ಇಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರವರೆಗೆ ಮೈಸೂರಿನ ವಿವೇಕಾನಂದ ವೃತ್ತದಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಲಿದ್ದಾರೆ. ಮಧ್ಯಾಹ್ನ 12.40ಕ್ಕೆ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶಾಖಾ ಮಠದಲ್ಲಿ ಭೋಜನ ಸೇವಿಸಲಿದ್ದಾರೆ. ಭೋಜನ ನಂತರ ಹೆಲಿಕಾಪ್ಟರ್ನಲ್ಲಿ ಶ್ರೀರಂಗಪಟ್ಟಣಕ್ಕೆ ಪ್ರಯಾಣಿಸಲಿದ್ದಾರೆ.
ಕುಂದಗೋಳ, ಧಾರವಾಡದಲ್ಲಿ ಪ್ರಿಯಾಂಕಾ ರೋಡ್ಶೋ ನಡೆಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ನವಲಗುಂದದಲ್ಲಿ ಪ್ರಿಯಾಂಕಾ ಗಾಂಧಿ ಪ್ರಚಾರ ಸಭೆ ನಡೆಯಲಿದ್ದು ಸಂಜೆ ಹಳಿಯಾಳ, ದಾಂಡೇಲಿಯಲ್ಲಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲಿದ್ದಾರೆ.
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…