Advertisement
ಸುದ್ದಿಗಳು

ಕಾಂಗ್ರೆಸ್​ ಅಧಿಕಾರಿಕ್ಕೆ ಬಂದರೆ ಮೀಸಲಾತಿ ಮಿತಿ ಶೇ 75ಕ್ಕೆ ಹೆಚ್ಚಳ: ಸಿದ್ಧರಾಮಯ್ಯ ಭರವಸೆ

Share

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಕೋರ್ಟ್​ ತಡೆ ನೀಡಿದೆ. ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿರುವ ವಿರೋಧ ಪಕ್ಷದ ನಾಯಕರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಲಿಂಗಾಯತ ಮತ್ತು ಒಕ್ಕಲಿಗರ ಮೀಸಲಾತಿ ಕುರಿತು ಕಾಂಗ್ರೆಸ್ ನಿಲುವನ್ನು ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್​ ಮಾಡಿದ್ದು, ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿ ಮಿತಿಯನ್ನು ಶೇಕಡಾ 50 ರಿಂದ 75 ಕ್ಕೆ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ, ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ.

ನಮ್ಮಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ ಮನೆಗೆ ತೆರಳಿ ವೈಜ್ಞಾನಿಕವಾಗಿ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಕೂಡ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ ಎಂದಿದ್ದಾರೆ.

ಅಮಿತ್ ಶಾ ವಿರುದ್ಧ ಸಿದ್ಧರಾಮಯ್ಯ ಕಿಡಿ

ಗೃಹ ಸಚಿವ ಅಮಿತ್​ ಶಾ ವಿರುದ್ಧ ಹಿರಿಯ್ದಿರುವ ಸಿದ್ಧರಾಮಯ್ಯ, ಗೃಹ ಸಚಿವ ಅಮಿತ್​ ಶಾ ಅವರೇ, ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡಲು ಮುಸ್ಲಿಮರ ಮೀಸಲಾತಿಯನ್ನು ಇಲ್ಲವೆ ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗ-ಲಿಂಗಾಯತರ ಮೀಸಲಾತಿ ಕಡಿತಗೊಳಿಸಬೇಕಾಗಿಲ್ಲ.

ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಈ ವಿವಾದವನ್ನು ಸುಲಭದಲ್ಲಿ ಬಗೆಹರಿಸಬಹುದು. ಬಿಜೆಪಿಗೆ ಒಕ್ಕಲಿಗರು-ಲಿಂಗಾಯತರ ಮೀಸಲಾತಿ ಹೆಚ್ಚಿಸುವ ಸದುದ್ದೇಶ ಇರಲಿಲ್ಲ. ಮುಸ್ಲಿಮರ ಮೀಸಲಾತಿಯನ್ನು ರದ್ದು ಮಾಡುವ ದುರುದ್ದೇಶವಷ್ಟೇ ಇತ್ತು. ಇದನ್ನು ಅರ್ಥಮಾಡಿಕೊಂಡೇ ಸುಪ್ರೀಂ ಕೋರ್ಟ್ ಸರ್ಕಾರದ ಮೀಸಲಾತಿ ನೀತಿಗೆ ತಡೆಯಾಜ್ಞೆ ನೀಡಿರುವುದು ಎಂದು ಕಿಡಿಕಾರಿದ್ದಾರೆ.

ನಮ್ಮ ಪಕ್ಷ ಮೀಸಲಾತಿ ಹೆಚ್ಚಳ ಪರವಾಗಿದೆ

ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ಪಕ್ಷದ ವಿರೋಧ ಇಲ್ಲ. ನಮ್ಮ ಪಕ್ಷ ಮೀಸಲಾತಿ ಹೆಚ್ಚಳದ ಪರವಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿರುವುದನ್ನಷ್ಟೇ ವಿರೋಧಿಸುತ್ತಿದ್ದೇವೆ. ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದೊಂದೇ ಈಗಿನ ಮೀಸಲಾತಿಯ ಗೊಂದಲ-ವಿವಾದವನ್ನು ಪರಿಹರಿಸಲು ಇರುವ ಸರಿಯಾದ ಮಾರ್ಗ. ಮೀಸಲಾತಿಗೆ ಈಗ ವಿಧಿಸಲಾಗಿರುವ ಶೇಕಡಾ 50ರ ಮಿತಿ ಸಂವಿಧಾನದಲ್ಲಿ ಹೇರಲಾದ ಮಿತಿ ಅಲ್ಲ, ಅದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗ.

ಸಂವಿಧಾನಕ್ಕೆ ತಿದ್ದುಪಡಿ ತರಬೇಕು

ಈಗಾಗಲೇ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿಯನ್ನು ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ ಒಂಭತ್ತನೇ ಶೆಡ್ಯೂಲ್​ಗೆ ಸೇರಿಸಬೇಕು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

18 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

19 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

23 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

23 hours ago