Advertisement
ಸುದ್ದಿಗಳು

ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಬಜರಂಗದಳ ನಿಷೇಧ ಪ್ರಸ್ತಾಪಕ್ಕೆ ಮೋದಿ ಟಾಂಗ್

Share

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಬಜರಂಗದಳ ನಿಷೇಧ ಪ್ರಸ್ತಾಪಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಕಾಂಗ್ರೆಸ್​​ನ ಈ​ ಪ್ರಣಾಳಿಕೆಯಲ್ಲಿ ಹೊಸ ತಂತ್ರ ಅಡಗಿದೆ. ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಿಬರುವುದಿಲ್ಲ ಎಂದು ಕಾಂಗ್ರೆಸ್​ ಪ್ರಣಾಳಿಕೆಗೆ ತಿರುಗೇಟು ನೀಡಿದ್ದಾರೆ. ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದರ ಬೆನ್ನಲ್ಲೇ ಮೋದಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್​ನಿಂದ ಬರೀ ಸುಳ್ಳಿನ ಆಶ್ವಾಸನೆ; ಮೋದಿ

ಭಾರತ ಅಭಿವೃದ್ದಿಯಾಗಬೇಕಾದರೆ ನಿಮ್ಮ ಒಂದು ಮತ ಬಹಳ ಅಮೂಲ್ಯವಾಗಿದೆ. ನೀವು ಈಗ ನೋಡುತ್ತಿದ್ದೀರಿ. ಕಾಂಗ್ರೆಸ್​ ರಾಜ್ಯದಲ್ಲಿ ಗ್ಯಾರಂಟಿಗಳ ಕಂತೆ ​ ಹಿಡಿದುಕೊಂಡು ಕುಳಿತಿದೆ. ಯಾವ ಪಕ್ಷಕ್ಕೆ ತನ್ನ ಅಸ್ತಿತ್ವದ ಬಗ್ಗೆ ಗೊತ್ತಿಲ್ಲವೋ ಆ ಪಕ್ಷ ಸುಳ್ಳಿನ ಗ್ಯಾರಂಟಿಗಳನ್ನು ಮಾತ್ರ ನೀಡುತ್ತದೆ. ಕಾಂಗ್ರೆಸ್​ ಬಡತನ ಮುಕ್ತ ಆಶ್ವಾಸನೆ ನೀಡಿತು ಆದರೆ ಬಡತನ ಮುಕ್ತವಾಗಿಲ್ಲ. ಆದರೆ ಕಾಂಗ್ರೆಸ್​ ನಾಯಕರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಕಾಂಗ್ರೆಸ್​ ಬಡಜನರ, ರೈತರ ಬಗ್ಗೆ ಬಹಳ ಮಾತನಾಡುತ್ತದೆ ಆದರೆ ಅದು ಹೇಳುವುದೊಂದು ಮಾಡುವುದೊಂದು ಎಂದು ಮೋದಿ ಗುಡುಗಿದರು.

ಕೋವಿಡ್ ಸಾಂಕ್ರಾಮಿಕವನ್ನು ಭಾರತ ಸಮರ್ಥವಾಗಿ ಎದುರಿಸಿತು. ಇದು ಜಗತ್ತೇ ಹುಬ್ಬೇರಿಸುವಂತೆ ಮಾಡಿತು. ಸದ್ಯ ಭಾರತ ಆರ್ಥಿಕ ಕ್ಷೇತ್ರದಲ್ಲಿ 5ನೇ ಸ್ಥಾನದಲ್ಲಿದೆ. ಮುಂದಿನ ಕೆಲವೇ ವರ್ಷಗಳಲ್ಲಿ 3ನೇ ಸ್ಥಾನಕ್ಕೆ ಬರುತ್ತದೆ. ಇದನ್ನು ನಾವು ಸಾಧಿಸಬೇಕು ಎಂದರೆ ನಮಗೆ ಬಹಳ ದೊಡ್ಡ ಸಹಾಯ ಮಾಡುವುದು ಕರ್ನಾಟಕ. ನಾವು ಕರ್ನಾಟಕವನ್ನು ದೇಶದಲ್ಲೇ ನಂಬರ್​ ಒನ್​ ರಾಜ್ಯ ಮಾಡುತ್ತೇವೆ. ಎಲ್ಲ ಕ್ಷೇತ್ರಗಳಿಗೂ ಉತ್ತೇಜನ ನೀಡುತ್ತೇವೆ. ಆದರೆ ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಮತ್ತು ಜೆಡಿಎಸ್​​ ಅವರ ಮೋಸಕ್ಕೆ ಒಳಗಾಗಬಾರದು ಎಂದು ಮೋದಿ ಹೇಳಿದರು.

ರಾಜ್ಯದಲ್ಲಿನ ಬಿಜೆಪಿ ಸರ್ಕಾರದಿಂದ ರೈತರ ಖಾತೆಗೆ 4 ಸಾವಿರ ರೂ. ಹಾಕಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 6 ಸಾವಿರ ರೂ. ನೇರವಾಗಿ ರೈತರ ಖಾತೆಗೆ ಜಮೆ ಆಗುತ್ತಿದೆ. ಡಬಲ್​ ಇಂಜಿನ್​ ಸರ್ಕಾರದಿಂದ ರೈತರಿಗೆ ಡಬಲ್​ ಲಾಭವಾಗುತ್ತಿದೆ ಎಂದು ಮೋದಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

5 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

6 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

19 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

19 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

20 hours ago