Advertisement
ಸುದ್ದಿಗಳು

ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಬಜರಂಗದಳ ನಿಷೇಧ ಪ್ರಸ್ತಾಪಕ್ಕೆ ಮೋದಿ ಟಾಂಗ್

Share

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಬಜರಂಗದಳ ನಿಷೇಧ ಪ್ರಸ್ತಾಪಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಕಾಂಗ್ರೆಸ್​​ನ ಈ​ ಪ್ರಣಾಳಿಕೆಯಲ್ಲಿ ಹೊಸ ತಂತ್ರ ಅಡಗಿದೆ. ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಿಬರುವುದಿಲ್ಲ ಎಂದು ಕಾಂಗ್ರೆಸ್​ ಪ್ರಣಾಳಿಕೆಗೆ ತಿರುಗೇಟು ನೀಡಿದ್ದಾರೆ. ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದರ ಬೆನ್ನಲ್ಲೇ ಮೋದಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್​ನಿಂದ ಬರೀ ಸುಳ್ಳಿನ ಆಶ್ವಾಸನೆ; ಮೋದಿ

ಭಾರತ ಅಭಿವೃದ್ದಿಯಾಗಬೇಕಾದರೆ ನಿಮ್ಮ ಒಂದು ಮತ ಬಹಳ ಅಮೂಲ್ಯವಾಗಿದೆ. ನೀವು ಈಗ ನೋಡುತ್ತಿದ್ದೀರಿ. ಕಾಂಗ್ರೆಸ್​ ರಾಜ್ಯದಲ್ಲಿ ಗ್ಯಾರಂಟಿಗಳ ಕಂತೆ ​ ಹಿಡಿದುಕೊಂಡು ಕುಳಿತಿದೆ. ಯಾವ ಪಕ್ಷಕ್ಕೆ ತನ್ನ ಅಸ್ತಿತ್ವದ ಬಗ್ಗೆ ಗೊತ್ತಿಲ್ಲವೋ ಆ ಪಕ್ಷ ಸುಳ್ಳಿನ ಗ್ಯಾರಂಟಿಗಳನ್ನು ಮಾತ್ರ ನೀಡುತ್ತದೆ. ಕಾಂಗ್ರೆಸ್​ ಬಡತನ ಮುಕ್ತ ಆಶ್ವಾಸನೆ ನೀಡಿತು ಆದರೆ ಬಡತನ ಮುಕ್ತವಾಗಿಲ್ಲ. ಆದರೆ ಕಾಂಗ್ರೆಸ್​ ನಾಯಕರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಕಾಂಗ್ರೆಸ್​ ಬಡಜನರ, ರೈತರ ಬಗ್ಗೆ ಬಹಳ ಮಾತನಾಡುತ್ತದೆ ಆದರೆ ಅದು ಹೇಳುವುದೊಂದು ಮಾಡುವುದೊಂದು ಎಂದು ಮೋದಿ ಗುಡುಗಿದರು.

ಕೋವಿಡ್ ಸಾಂಕ್ರಾಮಿಕವನ್ನು ಭಾರತ ಸಮರ್ಥವಾಗಿ ಎದುರಿಸಿತು. ಇದು ಜಗತ್ತೇ ಹುಬ್ಬೇರಿಸುವಂತೆ ಮಾಡಿತು. ಸದ್ಯ ಭಾರತ ಆರ್ಥಿಕ ಕ್ಷೇತ್ರದಲ್ಲಿ 5ನೇ ಸ್ಥಾನದಲ್ಲಿದೆ. ಮುಂದಿನ ಕೆಲವೇ ವರ್ಷಗಳಲ್ಲಿ 3ನೇ ಸ್ಥಾನಕ್ಕೆ ಬರುತ್ತದೆ. ಇದನ್ನು ನಾವು ಸಾಧಿಸಬೇಕು ಎಂದರೆ ನಮಗೆ ಬಹಳ ದೊಡ್ಡ ಸಹಾಯ ಮಾಡುವುದು ಕರ್ನಾಟಕ. ನಾವು ಕರ್ನಾಟಕವನ್ನು ದೇಶದಲ್ಲೇ ನಂಬರ್​ ಒನ್​ ರಾಜ್ಯ ಮಾಡುತ್ತೇವೆ. ಎಲ್ಲ ಕ್ಷೇತ್ರಗಳಿಗೂ ಉತ್ತೇಜನ ನೀಡುತ್ತೇವೆ. ಆದರೆ ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಮತ್ತು ಜೆಡಿಎಸ್​​ ಅವರ ಮೋಸಕ್ಕೆ ಒಳಗಾಗಬಾರದು ಎಂದು ಮೋದಿ ಹೇಳಿದರು.

ರಾಜ್ಯದಲ್ಲಿನ ಬಿಜೆಪಿ ಸರ್ಕಾರದಿಂದ ರೈತರ ಖಾತೆಗೆ 4 ಸಾವಿರ ರೂ. ಹಾಕಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 6 ಸಾವಿರ ರೂ. ನೇರವಾಗಿ ರೈತರ ಖಾತೆಗೆ ಜಮೆ ಆಗುತ್ತಿದೆ. ಡಬಲ್​ ಇಂಜಿನ್​ ಸರ್ಕಾರದಿಂದ ರೈತರಿಗೆ ಡಬಲ್​ ಲಾಭವಾಗುತ್ತಿದೆ ಎಂದು ಮೋದಿ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

3 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

6 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

7 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

8 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

20 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

23 hours ago