6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಬಂಪರ್

May 1, 2023
10:00 AM
ಐದು “ಗ್ಯಾರಂಟಿ’ ಘೋಷಿಸಿ ಉತ್ಸಾಹದಲ್ಲಿರುವ ಕಾಂಗ್ರೆಸ್‌ ಈಗ ಮತ್ತೂಂದು ಗ್ಯಾರಂಟಿ ಘೋಷಿಸಿದೆ. ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಕಟಿಸಿದ್ದಾರೆ.
 ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದ ಬಿಸಿ ತಾರಕಕ್ಕೇರಿದೆ. ದೆಹಲಿ ನಾಯಕರು ಸಮಾವೇಶ, ಸಭೆ, ರೋಡ್​ ಶೋಗಳ ಮೂಲಕ ಅಬ್ಬರಿಸುತ್ತಿದ್ದಾರೆ. ಪ್ರಚಾರದ ಬ್ಯುಸಿಯಾಗಿದ್ದ ನಾಯಕರು ಪ್ರಣಾಳಿಕೆಯತ್ತ ಚಿತ್ತ ಹರಿಸಿದ್ದಾರೆ. ಅದರಲ್ಲೂ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೆ ಮುನ್ನವೇ ಪ್ರಚಾರದ ಮಧ್ಯೆ ಮಧ್ಯೆ​​​ ಗ್ಯಾರಂಟಿ ಮೇಲೆ ಗ್ಯಾರಂಟಿ ಘೋಷಿಸುತ್ತಿದೆ. ಈಗಾಗಲೇ ಐದು ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂಪಾಯಿ ಮತ್ತು ಬಿಸಿಯೂಟ ನೌಕರರಿಗೆ ಐದು ಸಾವಿರ ರೂಪಾಯಿ ವೇತನ ನೀಡುವುದಾಗಿ ಬೆಳಗಾವಿಯಲ್ಲಿ ಕ್ರಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ. ಇದು ಕಾಂಗ್ರೆಸ್​ 6ನೇ ಗ್ಯಾರಂಟಿಯಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಭಾನುವಾರ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಗಾ ಗಾಂಧಿ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಈಗ ಇರುವ 5,000 ರೂ.ಗಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದರು.

Advertisement

ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದೀಗ ಆರನೇ ಗ್ಯಾರಂಟಿ ಘೋಷಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಗ್ಯಾರಂಟಿಗಳನ್ನು ಜಾರಿಗೆ ತರವುದಾಗಿ ಹೇಳಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |
April 27, 2025
1:12 PM
by: ಸಾಯಿಶೇಖರ್ ಕರಿಕಳ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ
ಸಾರ್ವಜನಿಕರಲ್ಲಿ ಮಲೇರಿಯಾ ಕುರಿತು ಅರಿವು ಮೂಡಿಸಲು ಜಾಗೃತಿ
April 27, 2025
10:46 AM
by: The Rural Mirror ಸುದ್ದಿಜಾಲ
50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ
April 27, 2025
10:39 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group