Advertisement
ಸುದ್ದಿಗಳು

6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಬಂಪರ್

Share
ಐದು “ಗ್ಯಾರಂಟಿ’ ಘೋಷಿಸಿ ಉತ್ಸಾಹದಲ್ಲಿರುವ ಕಾಂಗ್ರೆಸ್‌ ಈಗ ಮತ್ತೂಂದು ಗ್ಯಾರಂಟಿ ಘೋಷಿಸಿದೆ. ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಕಟಿಸಿದ್ದಾರೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದ ಬಿಸಿ ತಾರಕಕ್ಕೇರಿದೆ. ದೆಹಲಿ ನಾಯಕರು ಸಮಾವೇಶ, ಸಭೆ, ರೋಡ್​ ಶೋಗಳ ಮೂಲಕ ಅಬ್ಬರಿಸುತ್ತಿದ್ದಾರೆ. ಪ್ರಚಾರದ ಬ್ಯುಸಿಯಾಗಿದ್ದ ನಾಯಕರು ಪ್ರಣಾಳಿಕೆಯತ್ತ ಚಿತ್ತ ಹರಿಸಿದ್ದಾರೆ. ಅದರಲ್ಲೂ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೆ ಮುನ್ನವೇ ಪ್ರಚಾರದ ಮಧ್ಯೆ ಮಧ್ಯೆ​​​ ಗ್ಯಾರಂಟಿ ಮೇಲೆ ಗ್ಯಾರಂಟಿ ಘೋಷಿಸುತ್ತಿದೆ. ಈಗಾಗಲೇ ಐದು ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂಪಾಯಿ ಮತ್ತು ಬಿಸಿಯೂಟ ನೌಕರರಿಗೆ ಐದು ಸಾವಿರ ರೂಪಾಯಿ ವೇತನ ನೀಡುವುದಾಗಿ ಬೆಳಗಾವಿಯಲ್ಲಿ ಕ್ರಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ. ಇದು ಕಾಂಗ್ರೆಸ್​ 6ನೇ ಗ್ಯಾರಂಟಿಯಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಭಾನುವಾರ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಗಾ ಗಾಂಧಿ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಈಗ ಇರುವ 5,000 ರೂ.ಗಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದರು.

Advertisement
Advertisement
Advertisement
Advertisement

ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದೀಗ ಆರನೇ ಗ್ಯಾರಂಟಿ ಘೋಷಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಗ್ಯಾರಂಟಿಗಳನ್ನು ಜಾರಿಗೆ ತರವುದಾಗಿ ಹೇಳಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

34 mins ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago