Advertisement
ಸುದ್ದಿಗಳು

6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಬಂಪರ್

Share
ಐದು “ಗ್ಯಾರಂಟಿ’ ಘೋಷಿಸಿ ಉತ್ಸಾಹದಲ್ಲಿರುವ ಕಾಂಗ್ರೆಸ್‌ ಈಗ ಮತ್ತೂಂದು ಗ್ಯಾರಂಟಿ ಘೋಷಿಸಿದೆ. ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಕಟಿಸಿದ್ದಾರೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದ ಬಿಸಿ ತಾರಕಕ್ಕೇರಿದೆ. ದೆಹಲಿ ನಾಯಕರು ಸಮಾವೇಶ, ಸಭೆ, ರೋಡ್​ ಶೋಗಳ ಮೂಲಕ ಅಬ್ಬರಿಸುತ್ತಿದ್ದಾರೆ. ಪ್ರಚಾರದ ಬ್ಯುಸಿಯಾಗಿದ್ದ ನಾಯಕರು ಪ್ರಣಾಳಿಕೆಯತ್ತ ಚಿತ್ತ ಹರಿಸಿದ್ದಾರೆ. ಅದರಲ್ಲೂ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೆ ಮುನ್ನವೇ ಪ್ರಚಾರದ ಮಧ್ಯೆ ಮಧ್ಯೆ​​​ ಗ್ಯಾರಂಟಿ ಮೇಲೆ ಗ್ಯಾರಂಟಿ ಘೋಷಿಸುತ್ತಿದೆ. ಈಗಾಗಲೇ ಐದು ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂಪಾಯಿ ಮತ್ತು ಬಿಸಿಯೂಟ ನೌಕರರಿಗೆ ಐದು ಸಾವಿರ ರೂಪಾಯಿ ವೇತನ ನೀಡುವುದಾಗಿ ಬೆಳಗಾವಿಯಲ್ಲಿ ಕ್ರಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ. ಇದು ಕಾಂಗ್ರೆಸ್​ 6ನೇ ಗ್ಯಾರಂಟಿಯಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಭಾನುವಾರ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಗಾ ಗಾಂಧಿ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಈಗ ಇರುವ 5,000 ರೂ.ಗಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದರು.

ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದೀಗ ಆರನೇ ಗ್ಯಾರಂಟಿ ಘೋಷಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಗ್ಯಾರಂಟಿಗಳನ್ನು ಜಾರಿಗೆ ತರವುದಾಗಿ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

2 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

3 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

4 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

18 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

18 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago