Advertisement
ಸುದ್ದಿಗಳು

6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಬಂಪರ್

Share
ಐದು “ಗ್ಯಾರಂಟಿ’ ಘೋಷಿಸಿ ಉತ್ಸಾಹದಲ್ಲಿರುವ ಕಾಂಗ್ರೆಸ್‌ ಈಗ ಮತ್ತೂಂದು ಗ್ಯಾರಂಟಿ ಘೋಷಿಸಿದೆ. ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಕಟಿಸಿದ್ದಾರೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದ ಬಿಸಿ ತಾರಕಕ್ಕೇರಿದೆ. ದೆಹಲಿ ನಾಯಕರು ಸಮಾವೇಶ, ಸಭೆ, ರೋಡ್​ ಶೋಗಳ ಮೂಲಕ ಅಬ್ಬರಿಸುತ್ತಿದ್ದಾರೆ. ಪ್ರಚಾರದ ಬ್ಯುಸಿಯಾಗಿದ್ದ ನಾಯಕರು ಪ್ರಣಾಳಿಕೆಯತ್ತ ಚಿತ್ತ ಹರಿಸಿದ್ದಾರೆ. ಅದರಲ್ಲೂ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೆ ಮುನ್ನವೇ ಪ್ರಚಾರದ ಮಧ್ಯೆ ಮಧ್ಯೆ​​​ ಗ್ಯಾರಂಟಿ ಮೇಲೆ ಗ್ಯಾರಂಟಿ ಘೋಷಿಸುತ್ತಿದೆ. ಈಗಾಗಲೇ ಐದು ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂಪಾಯಿ ಮತ್ತು ಬಿಸಿಯೂಟ ನೌಕರರಿಗೆ ಐದು ಸಾವಿರ ರೂಪಾಯಿ ವೇತನ ನೀಡುವುದಾಗಿ ಬೆಳಗಾವಿಯಲ್ಲಿ ಕ್ರಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ. ಇದು ಕಾಂಗ್ರೆಸ್​ 6ನೇ ಗ್ಯಾರಂಟಿಯಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಭಾನುವಾರ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಗಾ ಗಾಂಧಿ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಈಗ ಇರುವ 5,000 ರೂ.ಗಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದರು.

ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದೀಗ ಆರನೇ ಗ್ಯಾರಂಟಿ ಘೋಷಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಗ್ಯಾರಂಟಿಗಳನ್ನು ಜಾರಿಗೆ ತರವುದಾಗಿ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

20 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago