Advertisement
ಸುದ್ದಿಗಳು

6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಬಂಪರ್

Share
ಐದು “ಗ್ಯಾರಂಟಿ’ ಘೋಷಿಸಿ ಉತ್ಸಾಹದಲ್ಲಿರುವ ಕಾಂಗ್ರೆಸ್‌ ಈಗ ಮತ್ತೂಂದು ಗ್ಯಾರಂಟಿ ಘೋಷಿಸಿದೆ. ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಕಟಿಸಿದ್ದಾರೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದ ಬಿಸಿ ತಾರಕಕ್ಕೇರಿದೆ. ದೆಹಲಿ ನಾಯಕರು ಸಮಾವೇಶ, ಸಭೆ, ರೋಡ್​ ಶೋಗಳ ಮೂಲಕ ಅಬ್ಬರಿಸುತ್ತಿದ್ದಾರೆ. ಪ್ರಚಾರದ ಬ್ಯುಸಿಯಾಗಿದ್ದ ನಾಯಕರು ಪ್ರಣಾಳಿಕೆಯತ್ತ ಚಿತ್ತ ಹರಿಸಿದ್ದಾರೆ. ಅದರಲ್ಲೂ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೆ ಮುನ್ನವೇ ಪ್ರಚಾರದ ಮಧ್ಯೆ ಮಧ್ಯೆ​​​ ಗ್ಯಾರಂಟಿ ಮೇಲೆ ಗ್ಯಾರಂಟಿ ಘೋಷಿಸುತ್ತಿದೆ. ಈಗಾಗಲೇ ಐದು ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂಪಾಯಿ ಮತ್ತು ಬಿಸಿಯೂಟ ನೌಕರರಿಗೆ ಐದು ಸಾವಿರ ರೂಪಾಯಿ ವೇತನ ನೀಡುವುದಾಗಿ ಬೆಳಗಾವಿಯಲ್ಲಿ ಕ್ರಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ. ಇದು ಕಾಂಗ್ರೆಸ್​ 6ನೇ ಗ್ಯಾರಂಟಿಯಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಭಾನುವಾರ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಗಾ ಗಾಂಧಿ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಈಗ ಇರುವ 5,000 ರೂ.ಗಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದರು.

ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದೀಗ ಆರನೇ ಗ್ಯಾರಂಟಿ ಘೋಷಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಗ್ಯಾರಂಟಿಗಳನ್ನು ಜಾರಿಗೆ ತರವುದಾಗಿ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

1 hour ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

4 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

8 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

8 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

17 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

18 hours ago