Advertisement
ಸುದ್ದಿಗಳು

ತಾತ ಸಿದ್ದರಾಮಯ್ಯ ಜೊತೆ ಕ್ಷೇತ್ರದಲ್ಲಿ ತಿರುಗಾಡಿದ ಧವನ್ ರಾಕೇಶ್ | ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ |

Share

ಮೊದಲ ಮಗ ರಾಕೇಶ್ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಬೆಳೆಸಲು ಸಿದ್ದರಾಮಯ್ಯ ಭಾರೀ ಕನಸು ಕಂಡಿದ್ದರು. ಆದ್ರೆ, ರಾಕೇಶ್   ಅಕಾಲಿಕ ಮರಣಕ್ಕೆ ತುತ್ತಾದ ನಂತರ ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಮುಸ್ಸಂಜೆಯಲ್ಲಿರುವಾಗಲೇ ಎರಡನೇ ಮಗ ಯತೀಂದ್ರ ಸಿದ್ದರಾಮಯ್ಯರನ್ನು ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ತಯಾರು ಮಾಡಿದ್ದಾರೆ. ಇದೀಗ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದೆ. ಸಿದ್ದರಾಮಯ್ಯನವರ ಎರಡನೇ ಪುತ್ರ ದಿವಂಗತ ರಾಕೇಶ್ ಪತ್ನಿ ಸ್ಮಿತಾ ಹಾಗೂ ಪುತ್ರ ಧವನ್ ರಾಕೇಶ್ ಮೈಸೂರಿನ ಸಿದ್ದರಾಮನಹುಂಡಿ ಆಗಮಿಸಿದ್ದು, ಸಿದ್ದರಾಮಯ್ಯ ಪರ ಪ್ರಚಾರ ಮಾಡಲಿದ್ದಾರೆ. ರಾಕೇಶ್​ ನಿಧನದ ಬಳಿಕ ಬೆಂಗಳೂರಿನಲ್ಲೇ ತಂಗಿರುವ ಸ್ಮಿತಾ ಹಾಗೂ ಧವನ್, ಸಿದ್ದರಾಮಯ್ಯನವರು ಇಂದು ನಾಮಪತ್ರ ಸಲ್ಲಿಸುತ್ತಿರುವುದರಿಂದ ಸಿದ್ದರಾಮನಹುಂಡಿ ಗ್ರಾಮಕ್ಕೆ ಬಂದಿದ್ದಾರೆ. ಇನ್ನು ಸಿದ್ದರಾಮಯ್ಯನವರ ಸೊಸೆ ಹಾಗೂ ಮೊಮ್ಮಗನನ್ನು ನೋಡಲು ಸಿದ್ದರಾಮನಹುಂಡಿ ನಿವಾಸದ ಬಳಿ ಜನರು ಜಮಾಯಿಸಿದ್ದು, ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.

ಇನ್ನು ಈ ಬಗ್ಗೆ ಸಿದ್ದರಾಮಯ್ಯನವರ ಮೊಮ್ಮಗ ಧವನ್ ರಾಕೇಶ್ ಮಾತನಾಡಿದ್ದು, ತಂದೆ ಎಂಎಲ್​ಎ ಕನಸು ಕಟ್ಟುಕೊಂಡಿದ್ದರು ಅದೇ ದಾರಿಯಲ್ಲಿ ನಾನು ಸಾಗುತ್ತೇನೆ. ನಾನು ಸ್ವ ಇಚ್ಚಿಯಿಂದ ವರುಣಾ ಚುನಾವಣೆಗೆ ಬಂದಿದ್ದೇನೆ. ನನ್ನ ತಾತ ನನಗೆ ರಾಜಕಾರಣಕ್ಕೆ ಬರಲು ಸ್ಪೂರ್ತಿ. ಜನರ ಪ್ರೀತಿ ನೋಡಿ ನಾನು ರಾಜಕಾರಣಕ್ಕೆ ಬರಬೇಕು ಅನಿಸಿತು ಎಂದು ರಾಜಕೀಯಕ್ಕೆ ಬರುವ ಆಸೆ ವ್ಯಕ್ತಪಡಿಸಿದ್ದಾನೆ.

ತಾತ, ಚಿಕ್ಕಪ್ಪ ಡಾ ಯತೀಂದ್ರ ಸಿದ್ದರಾಮಯ್ಯ ಸಾಕಷ್ಟು ಮಾಹಿತಿ ನೀಡುತ್ತಾರೆ. ನನ್ನ ವಿದ್ಯಾಭ್ಯಾಸ ಮುಗಿದ ನಂತರ ಸಕ್ರಿಯ ರಾಜಕಾರಣಕ್ಕೆ ಬರುವಂತೆ ತಾತಾ ಹೇಳಿದ್ದಾರೆ. ನಾನು ಕಾನೂನು ಪದವಿ ಪಡೆದ ನಂತರ ರಾಜಕಾರಣಕ್ಕೆ ಬರುತ್ತೇನೆ. ಅಪ್ಪನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ನಾನು ರಾಜಕಾರಣದ ಬಗ್ಗೆ ಆಸಕ್ತಿ ಹೊಂದಿರುವುದು ಮನೆಯವರಿಗೆಲ್ಲಾ ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾನೆ.

ಇನ್ನು ಮೊಮ್ಮಗ ರಾಜಕೀಯ ಪ್ರವೇಶದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಧವನ್‍ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ. ಅವನಿಗೆ ಇನ್ನೂ 17 ವರ್ಷ ರಾಜಕೀಯಕ್ಕೆ ಬರಲು ಬಹಳ ಸಮಯವಿದೆ. ಈಗ ಆಸಕ್ತಿಯಿಂದ ಎಲ್ಲವನ್ನೂ ನೋಡಿಕೊಳ್ಳಲು ಬರುತ್ತಿದ್ದಾನೆ. ಮೊಮ್ಮಗನಿಗೆ ರಾಜಕೀಯ ಆಸಕ್ತಿ ಇರುವುದು ತಾತನಾಗಿ ನನಗೆ ಖುಷಿ ಇದೆ. ಪ್ರಚಾರಕ್ಕೆ ಅವನು ಇಷ್ಟ ಪಟ್ಟು ಬಂದರೆ ಬರಲಿ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

1 hour ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

2 hours ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

7 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

11 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

11 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

19 hours ago