Advertisement
ಸುದ್ದಿಗಳು

ತಾತ ಸಿದ್ದರಾಮಯ್ಯ ಜೊತೆ ಕ್ಷೇತ್ರದಲ್ಲಿ ತಿರುಗಾಡಿದ ಧವನ್ ರಾಕೇಶ್ | ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ |

Share

ಮೊದಲ ಮಗ ರಾಕೇಶ್ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಬೆಳೆಸಲು ಸಿದ್ದರಾಮಯ್ಯ ಭಾರೀ ಕನಸು ಕಂಡಿದ್ದರು. ಆದ್ರೆ, ರಾಕೇಶ್   ಅಕಾಲಿಕ ಮರಣಕ್ಕೆ ತುತ್ತಾದ ನಂತರ ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಮುಸ್ಸಂಜೆಯಲ್ಲಿರುವಾಗಲೇ ಎರಡನೇ ಮಗ ಯತೀಂದ್ರ ಸಿದ್ದರಾಮಯ್ಯರನ್ನು ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ತಯಾರು ಮಾಡಿದ್ದಾರೆ. ಇದೀಗ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದೆ. ಸಿದ್ದರಾಮಯ್ಯನವರ ಎರಡನೇ ಪುತ್ರ ದಿವಂಗತ ರಾಕೇಶ್ ಪತ್ನಿ ಸ್ಮಿತಾ ಹಾಗೂ ಪುತ್ರ ಧವನ್ ರಾಕೇಶ್ ಮೈಸೂರಿನ ಸಿದ್ದರಾಮನಹುಂಡಿ ಆಗಮಿಸಿದ್ದು, ಸಿದ್ದರಾಮಯ್ಯ ಪರ ಪ್ರಚಾರ ಮಾಡಲಿದ್ದಾರೆ. ರಾಕೇಶ್​ ನಿಧನದ ಬಳಿಕ ಬೆಂಗಳೂರಿನಲ್ಲೇ ತಂಗಿರುವ ಸ್ಮಿತಾ ಹಾಗೂ ಧವನ್, ಸಿದ್ದರಾಮಯ್ಯನವರು ಇಂದು ನಾಮಪತ್ರ ಸಲ್ಲಿಸುತ್ತಿರುವುದರಿಂದ ಸಿದ್ದರಾಮನಹುಂಡಿ ಗ್ರಾಮಕ್ಕೆ ಬಂದಿದ್ದಾರೆ. ಇನ್ನು ಸಿದ್ದರಾಮಯ್ಯನವರ ಸೊಸೆ ಹಾಗೂ ಮೊಮ್ಮಗನನ್ನು ನೋಡಲು ಸಿದ್ದರಾಮನಹುಂಡಿ ನಿವಾಸದ ಬಳಿ ಜನರು ಜಮಾಯಿಸಿದ್ದು, ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.

ಇನ್ನು ಈ ಬಗ್ಗೆ ಸಿದ್ದರಾಮಯ್ಯನವರ ಮೊಮ್ಮಗ ಧವನ್ ರಾಕೇಶ್ ಮಾತನಾಡಿದ್ದು, ತಂದೆ ಎಂಎಲ್​ಎ ಕನಸು ಕಟ್ಟುಕೊಂಡಿದ್ದರು ಅದೇ ದಾರಿಯಲ್ಲಿ ನಾನು ಸಾಗುತ್ತೇನೆ. ನಾನು ಸ್ವ ಇಚ್ಚಿಯಿಂದ ವರುಣಾ ಚುನಾವಣೆಗೆ ಬಂದಿದ್ದೇನೆ. ನನ್ನ ತಾತ ನನಗೆ ರಾಜಕಾರಣಕ್ಕೆ ಬರಲು ಸ್ಪೂರ್ತಿ. ಜನರ ಪ್ರೀತಿ ನೋಡಿ ನಾನು ರಾಜಕಾರಣಕ್ಕೆ ಬರಬೇಕು ಅನಿಸಿತು ಎಂದು ರಾಜಕೀಯಕ್ಕೆ ಬರುವ ಆಸೆ ವ್ಯಕ್ತಪಡಿಸಿದ್ದಾನೆ.

ತಾತ, ಚಿಕ್ಕಪ್ಪ ಡಾ ಯತೀಂದ್ರ ಸಿದ್ದರಾಮಯ್ಯ ಸಾಕಷ್ಟು ಮಾಹಿತಿ ನೀಡುತ್ತಾರೆ. ನನ್ನ ವಿದ್ಯಾಭ್ಯಾಸ ಮುಗಿದ ನಂತರ ಸಕ್ರಿಯ ರಾಜಕಾರಣಕ್ಕೆ ಬರುವಂತೆ ತಾತಾ ಹೇಳಿದ್ದಾರೆ. ನಾನು ಕಾನೂನು ಪದವಿ ಪಡೆದ ನಂತರ ರಾಜಕಾರಣಕ್ಕೆ ಬರುತ್ತೇನೆ. ಅಪ್ಪನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ನಾನು ರಾಜಕಾರಣದ ಬಗ್ಗೆ ಆಸಕ್ತಿ ಹೊಂದಿರುವುದು ಮನೆಯವರಿಗೆಲ್ಲಾ ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾನೆ.

ಇನ್ನು ಮೊಮ್ಮಗ ರಾಜಕೀಯ ಪ್ರವೇಶದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಧವನ್‍ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ. ಅವನಿಗೆ ಇನ್ನೂ 17 ವರ್ಷ ರಾಜಕೀಯಕ್ಕೆ ಬರಲು ಬಹಳ ಸಮಯವಿದೆ. ಈಗ ಆಸಕ್ತಿಯಿಂದ ಎಲ್ಲವನ್ನೂ ನೋಡಿಕೊಳ್ಳಲು ಬರುತ್ತಿದ್ದಾನೆ. ಮೊಮ್ಮಗನಿಗೆ ರಾಜಕೀಯ ಆಸಕ್ತಿ ಇರುವುದು ತಾತನಾಗಿ ನನಗೆ ಖುಷಿ ಇದೆ. ಪ್ರಚಾರಕ್ಕೆ ಅವನು ಇಷ್ಟ ಪಟ್ಟು ಬಂದರೆ ಬರಲಿ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

4 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

11 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago