Advertisement
ಸುದ್ದಿಗಳು

ತಾತ ಸಿದ್ದರಾಮಯ್ಯ ಜೊತೆ ಕ್ಷೇತ್ರದಲ್ಲಿ ತಿರುಗಾಡಿದ ಧವನ್ ರಾಕೇಶ್ | ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ |

Share

ಮೊದಲ ಮಗ ರಾಕೇಶ್ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಬೆಳೆಸಲು ಸಿದ್ದರಾಮಯ್ಯ ಭಾರೀ ಕನಸು ಕಂಡಿದ್ದರು. ಆದ್ರೆ, ರಾಕೇಶ್   ಅಕಾಲಿಕ ಮರಣಕ್ಕೆ ತುತ್ತಾದ ನಂತರ ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಮುಸ್ಸಂಜೆಯಲ್ಲಿರುವಾಗಲೇ ಎರಡನೇ ಮಗ ಯತೀಂದ್ರ ಸಿದ್ದರಾಮಯ್ಯರನ್ನು ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ತಯಾರು ಮಾಡಿದ್ದಾರೆ. ಇದೀಗ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದೆ. ಸಿದ್ದರಾಮಯ್ಯನವರ ಎರಡನೇ ಪುತ್ರ ದಿವಂಗತ ರಾಕೇಶ್ ಪತ್ನಿ ಸ್ಮಿತಾ ಹಾಗೂ ಪುತ್ರ ಧವನ್ ರಾಕೇಶ್ ಮೈಸೂರಿನ ಸಿದ್ದರಾಮನಹುಂಡಿ ಆಗಮಿಸಿದ್ದು, ಸಿದ್ದರಾಮಯ್ಯ ಪರ ಪ್ರಚಾರ ಮಾಡಲಿದ್ದಾರೆ. ರಾಕೇಶ್​ ನಿಧನದ ಬಳಿಕ ಬೆಂಗಳೂರಿನಲ್ಲೇ ತಂಗಿರುವ ಸ್ಮಿತಾ ಹಾಗೂ ಧವನ್, ಸಿದ್ದರಾಮಯ್ಯನವರು ಇಂದು ನಾಮಪತ್ರ ಸಲ್ಲಿಸುತ್ತಿರುವುದರಿಂದ ಸಿದ್ದರಾಮನಹುಂಡಿ ಗ್ರಾಮಕ್ಕೆ ಬಂದಿದ್ದಾರೆ. ಇನ್ನು ಸಿದ್ದರಾಮಯ್ಯನವರ ಸೊಸೆ ಹಾಗೂ ಮೊಮ್ಮಗನನ್ನು ನೋಡಲು ಸಿದ್ದರಾಮನಹುಂಡಿ ನಿವಾಸದ ಬಳಿ ಜನರು ಜಮಾಯಿಸಿದ್ದು, ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.

ಇನ್ನು ಈ ಬಗ್ಗೆ ಸಿದ್ದರಾಮಯ್ಯನವರ ಮೊಮ್ಮಗ ಧವನ್ ರಾಕೇಶ್ ಮಾತನಾಡಿದ್ದು, ತಂದೆ ಎಂಎಲ್​ಎ ಕನಸು ಕಟ್ಟುಕೊಂಡಿದ್ದರು ಅದೇ ದಾರಿಯಲ್ಲಿ ನಾನು ಸಾಗುತ್ತೇನೆ. ನಾನು ಸ್ವ ಇಚ್ಚಿಯಿಂದ ವರುಣಾ ಚುನಾವಣೆಗೆ ಬಂದಿದ್ದೇನೆ. ನನ್ನ ತಾತ ನನಗೆ ರಾಜಕಾರಣಕ್ಕೆ ಬರಲು ಸ್ಪೂರ್ತಿ. ಜನರ ಪ್ರೀತಿ ನೋಡಿ ನಾನು ರಾಜಕಾರಣಕ್ಕೆ ಬರಬೇಕು ಅನಿಸಿತು ಎಂದು ರಾಜಕೀಯಕ್ಕೆ ಬರುವ ಆಸೆ ವ್ಯಕ್ತಪಡಿಸಿದ್ದಾನೆ.

Advertisement

ತಾತ, ಚಿಕ್ಕಪ್ಪ ಡಾ ಯತೀಂದ್ರ ಸಿದ್ದರಾಮಯ್ಯ ಸಾಕಷ್ಟು ಮಾಹಿತಿ ನೀಡುತ್ತಾರೆ. ನನ್ನ ವಿದ್ಯಾಭ್ಯಾಸ ಮುಗಿದ ನಂತರ ಸಕ್ರಿಯ ರಾಜಕಾರಣಕ್ಕೆ ಬರುವಂತೆ ತಾತಾ ಹೇಳಿದ್ದಾರೆ. ನಾನು ಕಾನೂನು ಪದವಿ ಪಡೆದ ನಂತರ ರಾಜಕಾರಣಕ್ಕೆ ಬರುತ್ತೇನೆ. ಅಪ್ಪನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ನಾನು ರಾಜಕಾರಣದ ಬಗ್ಗೆ ಆಸಕ್ತಿ ಹೊಂದಿರುವುದು ಮನೆಯವರಿಗೆಲ್ಲಾ ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾನೆ.

ಇನ್ನು ಮೊಮ್ಮಗ ರಾಜಕೀಯ ಪ್ರವೇಶದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಧವನ್‍ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ. ಅವನಿಗೆ ಇನ್ನೂ 17 ವರ್ಷ ರಾಜಕೀಯಕ್ಕೆ ಬರಲು ಬಹಳ ಸಮಯವಿದೆ. ಈಗ ಆಸಕ್ತಿಯಿಂದ ಎಲ್ಲವನ್ನೂ ನೋಡಿಕೊಳ್ಳಲು ಬರುತ್ತಿದ್ದಾನೆ. ಮೊಮ್ಮಗನಿಗೆ ರಾಜಕೀಯ ಆಸಕ್ತಿ ಇರುವುದು ತಾತನಾಗಿ ನನಗೆ ಖುಷಿ ಇದೆ. ಪ್ರಚಾರಕ್ಕೆ ಅವನು ಇಷ್ಟ ಪಟ್ಟು ಬಂದರೆ ಬರಲಿ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago