ಇಂದಿನಿಂದ ಎರಡು ದಿನ ಬಿಜೆಪಿ ಕೋರ್ ಕಮಿಟಿ ಸಭೆ | ಏ.8ಕ್ಕೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ | ಸುಳ್ಯಕ್ಕೆ ಹೊಸಮುಖ ? |

April 4, 2023
10:59 AM

ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏಪ್ರಿಲ್ 8 ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಕೆಲವು ಅಭ್ಯರ್ಥಿಗಳ ಬದಲಾವಣೆಯ ಸೂಚನೆ ಇದೆ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಅಭ್ಯರ್ಥಿ ಬದಲಾವಣೆ ಬಹುತೇಕ ಖಚಿತವಾಗಿದೆ. ಹೊಸ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದು ಖಾಸಗಿ ಸಂಸ್ಥೆಯ ಉದ್ಯೋಗಿ ಯುವಕ ಹಾಗೂ ಮಹಿಳಾ ಅಭ್ಯರ್ಥಿಯೊಬ್ಬರ ಹೆಸರು ಮುನ್ನೆಲೆಗೆ ಬಂದಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಕಡೆ ಮಾತ್ರಾ ಅಭ್ಯರ್ಥಿ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದಿನಿಂದ ಎರಡು ದಿನ ನಡೆಯಲಿರುವ ರಾಜ್ಯ ಮಟ್ಟದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ, ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ. ಅದಾದ ಬಳಿಕ ಮತ್ತೊಂದು ಸುತ್ತಿನಲ್ಲಿ ಹೈಕಮಾಂಡ್‌ ಅಂತಿಮಗೊಳಿಸುತ್ತದೆ. ಏಪ್ರಿಲ್ 8 ರಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅಂದೇ ಫೈನಲ್ ಪಟ್ಟಿ ಅಂತಿಮಗೊಳ್ಳಲಿದೆ ಎನ್ನುವುದು  ಸದ್ಯದ ಮಾಹಿತಿ.

ರಾಜ್ಯದ ಹಲವು ಕ್ಷೇತ್ರಗಳಲ್ಲಿ  ಹಾಲಿ ಶಾಸಕರ ವಿರುದ್ಧ ವಿರೋಧಿ ಅಲೆ ಕಂಡುಬಂದಿದೆ. ಈ ಎಲ್ಲಾ ಮಾಹಿತಿ ಸಂಗ್ರಹ ಮಾಡಿರುವ ಪ್ರಮುಖರು ವಿರೋಧಿ ಎಲೆ ಎದುರಿಸಲು ತಂತ್ರಗಾರಿಕೆಯನ್ನು ನಡೆಸುತ್ತಿದ್ದಾರೆ. ಈ ಬಾರಿ ವಿಶೇಷವಾಗಿ ಬಿಜೆಪಿಯ  ದಕ್ಷಿಣ ಭಾರತದ ಹೆಬ್ಬಾಗಿಲು ಎಂದು ಕರೆಯಿಸಿಕೊಂಡಿರುವ  ದಕ್ಷಿಣಕನ್ನಡದಲ್ಲಿ ವಿರೋಧಿ ಅಲೆ ಕಂಡಿರುವುದು ತಲೆನೋವಾಗಿ ಪರಿಣಮಿಸಿದೆ. ಕಳೆದ ಎಲ್ಲಾ ಚುನಾವಣೆಯಲ್ಲೂ ಇಷ್ಟು ಪ್ರಮಾಣದ ವಿರೋಧಿ ಅಲೆ ಕಂಡಿರಲಿಲ್ಲ. ಚುನಾವಣೆಗೂ ಮೊದಲೇ ಪ್ರಮುಖರು ಈ ಭಿನ್ನಾಭಿಪ್ರಾಯಗಳನ್ನು ಶಮನ ಮಾಡುತ್ತಿದ್ದರು. ಆದರೆ ಈ ಬಾರಿ ಇತರ ಪಕ್ಷಗಳಂತೆಯೇ ಬಿಜೆಪಿಗೂ ಈ ಬಾರಿ ಸಾಧ್ಯವಾಗಲಿಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror