ಸುದ್ದಿಗಳು

ಇಂದಿನಿಂದ ಎರಡು ದಿನ ಬಿಜೆಪಿ ಕೋರ್ ಕಮಿಟಿ ಸಭೆ | ಏ.8ಕ್ಕೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ | ಸುಳ್ಯಕ್ಕೆ ಹೊಸಮುಖ ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏಪ್ರಿಲ್ 8 ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಕೆಲವು ಅಭ್ಯರ್ಥಿಗಳ ಬದಲಾವಣೆಯ ಸೂಚನೆ ಇದೆ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಅಭ್ಯರ್ಥಿ ಬದಲಾವಣೆ ಬಹುತೇಕ ಖಚಿತವಾಗಿದೆ. ಹೊಸ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದು ಖಾಸಗಿ ಸಂಸ್ಥೆಯ ಉದ್ಯೋಗಿ ಯುವಕ ಹಾಗೂ ಮಹಿಳಾ ಅಭ್ಯರ್ಥಿಯೊಬ್ಬರ ಹೆಸರು ಮುನ್ನೆಲೆಗೆ ಬಂದಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಕಡೆ ಮಾತ್ರಾ ಅಭ್ಯರ್ಥಿ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

Advertisement

ಇಂದಿನಿಂದ ಎರಡು ದಿನ ನಡೆಯಲಿರುವ ರಾಜ್ಯ ಮಟ್ಟದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ, ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ. ಅದಾದ ಬಳಿಕ ಮತ್ತೊಂದು ಸುತ್ತಿನಲ್ಲಿ ಹೈಕಮಾಂಡ್‌ ಅಂತಿಮಗೊಳಿಸುತ್ತದೆ. ಏಪ್ರಿಲ್ 8 ರಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅಂದೇ ಫೈನಲ್ ಪಟ್ಟಿ ಅಂತಿಮಗೊಳ್ಳಲಿದೆ ಎನ್ನುವುದು  ಸದ್ಯದ ಮಾಹಿತಿ.

ರಾಜ್ಯದ ಹಲವು ಕ್ಷೇತ್ರಗಳಲ್ಲಿ  ಹಾಲಿ ಶಾಸಕರ ವಿರುದ್ಧ ವಿರೋಧಿ ಅಲೆ ಕಂಡುಬಂದಿದೆ. ಈ ಎಲ್ಲಾ ಮಾಹಿತಿ ಸಂಗ್ರಹ ಮಾಡಿರುವ ಪ್ರಮುಖರು ವಿರೋಧಿ ಎಲೆ ಎದುರಿಸಲು ತಂತ್ರಗಾರಿಕೆಯನ್ನು ನಡೆಸುತ್ತಿದ್ದಾರೆ. ಈ ಬಾರಿ ವಿಶೇಷವಾಗಿ ಬಿಜೆಪಿಯ  ದಕ್ಷಿಣ ಭಾರತದ ಹೆಬ್ಬಾಗಿಲು ಎಂದು ಕರೆಯಿಸಿಕೊಂಡಿರುವ  ದಕ್ಷಿಣಕನ್ನಡದಲ್ಲಿ ವಿರೋಧಿ ಅಲೆ ಕಂಡಿರುವುದು ತಲೆನೋವಾಗಿ ಪರಿಣಮಿಸಿದೆ. ಕಳೆದ ಎಲ್ಲಾ ಚುನಾವಣೆಯಲ್ಲೂ ಇಷ್ಟು ಪ್ರಮಾಣದ ವಿರೋಧಿ ಅಲೆ ಕಂಡಿರಲಿಲ್ಲ. ಚುನಾವಣೆಗೂ ಮೊದಲೇ ಪ್ರಮುಖರು ಈ ಭಿನ್ನಾಭಿಪ್ರಾಯಗಳನ್ನು ಶಮನ ಮಾಡುತ್ತಿದ್ದರು. ಆದರೆ ಈ ಬಾರಿ ಇತರ ಪಕ್ಷಗಳಂತೆಯೇ ಬಿಜೆಪಿಗೂ ಈ ಬಾರಿ ಸಾಧ್ಯವಾಗಲಿಲ್ಲ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

2 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

2 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

2 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

2 hours ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

16 hours ago