Advertisement
ಸುದ್ದಿಗಳು

ವಿಷ್ಣುಗುಪ್ತ ವಿವಿಗೆ ಕರ್ಣಾಟಕ ಬ್ಯಾಂಕ್ ಸಂಶೋಧನಾ ಕೇಂದ್ರ ಕೊಡುಗೆ

Share

ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಭಾರತೀಯ ಸಂಸ್ಕೃತಿಯ ಬಗ್ಗೆ ಆಳವಾದ ಸಂಶೋಧನೆ ಕೈಗೊಳ್ಳುವ ಉದ್ದೇಶದಿಂದ ಕರ್ಣಾಟಕ ಬ್ಯಾಂಕ್ 55 ಲಕ್ಷ ರೂಪಾಯಿ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ನಿರ್ಮಿಸಿಕೊಟ್ಟಿದೆ ಎಂದು  ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.

ಅಶೋಕೆಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಭಾನುವಾರ ಆಶೀರ್ವಚನ ನೀಡಿ, ಈ ಸಂಶೋಧನಾ ಕೇಂದ್ರವನ್ನು ಪ್ರಾಯೋಜಿಸುವ ಮೂಲಕ ಕರ್ಣಾಟಕ ಬ್ಯಾಂಕ್ ನಿಜ ಅರ್ಥದಲ್ಲಿ ಸಾಮಾಜಿಕ ಹೊಣೆಗಾರಿಕೆ ಮೆರೆದಿದೆ. ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಬ್ಯಾಂಕಿನ ಕೊಡುಗೆ ಶ್ಲಾಘನೀಯ ಎಂದರು. ಮಠ ಎಂಬ ಶಬ್ದಕ್ಕೆ ವಿದ್ಯಾರ್ಥಿಗಳಿರುವ ಸ್ಥಾನ ಎಂಬ ವಿವರಣೆ ಕೋಶದಲ್ಲಿದೆ. ಮಠಕ್ಕೆ ಮಠತ್ವ ಸಿದ್ಧಿಸುವುದೇ ವಿದ್ಯಾರ್ಥಿಗಳಿಂದ. ಆದ್ದರಿಂದಲೇ ಇಲ್ಲಿನ ಮೂಲಮಠ ಅಭಿವೃದ್ಧಿಪಡಿಸುವುದಕ್ಕೆ ಪೂರ್ವಭಾವಿಯಾಗಿ ಗುರುಕುಲಗಳ ಸಮುಚ್ಛಯ ಅಂದರೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಯಾಗಿದೆ ಎಂದು ಬಣ್ಣಿಸಿದರು.

ಯಾವುದೇ ಸರ್ಕಾರಿ ಅನುದಾನವಿಲ್ಲದೇ ಸಮಾಜದ ಭಿಕ್ಷೆಯಿಂದಲೇ ಈ ಸತ್ಕಾರ್ಯಗಳು ನಡೆಯುತ್ತಿವೆ. ಇದಕ್ಕಾಗಿಯೇ ಛಾತ್ರಭಿಕ್ಷೆ ಎಂಬ ವಿಶಿಷ್ಟ ಪರಿಕಲ್ಪನೆ ರೂಪುಗೊಂಡಿದೆ. ಛಾತ್ರಭಿಕ್ಷೆಯಲ್ಲಿ ಸಮಾಜದ ಮಾತೆಯರು ಇಲ್ಲಿನ ವಿದ್ಯಾರ್ಥಿಗಳಿಂದ ಪೂಜೆಗೊಳ್ಳುತ್ತಾರೆ. ಮಾತೆಯರು ಪ್ರತಿಯಾಗಿ ಛಾತ್ರರಿಗೆ ಭಿಕ್ಷೆ ನೀಡುತ್ತಾರೆ. ಇಂದಿನ ಛಾತ್ರಭಿಕ್ಷೆಯಲ್ಲಿ ಕುಮಟಾ ಮಂಡಲದಿಂದ 120 ಮಾತೆಯರು ಇಂದಿನ ಛಾತ್ರಭಿಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ ಎಂದರು.
ಗುರುಕುಲದ ಮಕ್ಕಳಿಗೆ ಮಾತೃಸ್ಥಾನದಲ್ಲಿ ನಿಂತು ಮಾತೆಯರು ಆದರ್ಶ ಮೆರೆದಿದ್ದಾರೆ. ಮಾತೆಯರ ಕೊಡುಗೆ ಛಾತ್ರರಿಗೆ ಮಾತ್ರವಲ್ಲದೇ ಗುರುಕುಲಕ್ಕೂ ಭಿಕ್ಷೆ ಎಂದು ಬಣ್ಣಿಸಿದರು.

ಕರ್ನಾಟಕ ಬ್ಯಾಂಕಿನ ಮಹಾಪ್ರಬಂಧಕ ಬಿ.ಎಸ್.ರಾಜಾ, ಉಪ ಮಹಾಪ್ರಬಂಧಕ ಕೆ.ಶ್ಯಾಮ್, ಸಹಾಯಕ ಮಹಾಪ್ರಬಂಧಕ ವಾದಿರಾಜ, ಗೋಕರ್ಣ ಶಾಖೆಯ ಪ್ರಬಂಧಕ ಪರಮೇಶ್ವರ ಹೆಗಡೆ ಅವರು ಶ್ರೀಗಳಿಂದ ಆಶೀರ್ವಾದ ಪಡೆದರು. ದೇವಸ್ಯ ಪುರುಷೋತ್ತಮ ಭಟ್ ಮತ್ತು ಕುಟುಂಬ ಸರ್ವಸೇವೆ ನೆರವೇರಿಸಿತು. ಚಾತುರ್ಮಾಸ್ಯ ತಂಡದ ಪ್ರಧಾನ ಸಂಚಾಲಕ ಮಂಜುನಾಥ ಸುವರ್ಣಗದ್ದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನ ಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಮಹೇಶ್ ಹೆಗಡೆ, ಮಡಿಕೇರಿಯ ಪುರುಷೋತ್ತಮ ಭಟ್, ನಾರಾಯಣಮೂರ್ತಿ, ಶ್ರೀಮಠದ ಶಾಸ್ತ್ರಿಗಳಾದ ಸುಚೇತನ ಶಾಸ್ತ್ರಿ, ಸುಬ್ರಾಯ ಅಗ್ನಿಹೋತ್ರಿ, ಶ್ರೀಕಾರ್ಯದರ್ಶಿ ಜಿ.ಕೆ.ಮಧು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

17 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

18 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago