ಸಿಎಂ ಸಿದ್ದರಾಮಯ್ಯ ಬಜೆಟ್ #Budget ಮಂಡಿಸುತ್ತಿದ್ದಾರೆ. ಗ್ಯಾರಂಟಿ ಭಾರಗಳನ್ನು ಇಳಿಸಲು ತೆರಿಗೆ ಮೊರೆ ಹೋಗಿರುವುದು ಗೋಚರಿಸುತ್ತಿದೆ. ಬಜೆಟ್ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಬಜೆಟ್ ಆರಂಭಿಸಿದರು.
ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಆದರೆ ರಾಜ್ಯದ ಅನ್ನದಾತರಿಗೆ (Farmers) ನೆರವು ಯೋಜನೆಯತ್ತ ಮನಸ್ಸು ಮಾಡಿದ್ದಾರೆ. ಬಡ್ಡಿ ರಹಿತ ಸಾಲದ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಈ ಮಿತಿಯನ್ನು ಹೆಚ್ಚಳ ಮಾಡಲಾಗಿದೆ.
5 ಗ್ಯಾರಂಟಿ #GuaranteeScheme ಯೋಜನೆಯನ್ನು ಜಾರಿ ಮಾಡಲು ಸರ್ಕಾರ ಅಬಕಾರಿ ಸುಂಕವನ್ನು #ExerciseDutty ಏರಿಸಿದೆ. ಈ ಮೂಲಕ ಮಧ್ಯಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್ಗಳ ಮೇಲಿ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185% ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. 2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿಮಾಡಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…