ಸಿಎಂ ಸಿದ್ದರಾಮಯ್ಯ ಬಜೆಟ್ #Budget ಮಂಡಿಸುತ್ತಿದ್ದಾರೆ. ಗ್ಯಾರಂಟಿ ಭಾರಗಳನ್ನು ಇಳಿಸಲು ತೆರಿಗೆ ಮೊರೆ ಹೋಗಿರುವುದು ಗೋಚರಿಸುತ್ತಿದೆ. ಬಜೆಟ್ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಬಜೆಟ್ ಆರಂಭಿಸಿದರು.
ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಆದರೆ ರಾಜ್ಯದ ಅನ್ನದಾತರಿಗೆ (Farmers) ನೆರವು ಯೋಜನೆಯತ್ತ ಮನಸ್ಸು ಮಾಡಿದ್ದಾರೆ. ಬಡ್ಡಿ ರಹಿತ ಸಾಲದ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಈ ಮಿತಿಯನ್ನು ಹೆಚ್ಚಳ ಮಾಡಲಾಗಿದೆ.
5 ಗ್ಯಾರಂಟಿ #GuaranteeScheme ಯೋಜನೆಯನ್ನು ಜಾರಿ ಮಾಡಲು ಸರ್ಕಾರ ಅಬಕಾರಿ ಸುಂಕವನ್ನು #ExerciseDutty ಏರಿಸಿದೆ. ಈ ಮೂಲಕ ಮಧ್ಯಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್ಗಳ ಮೇಲಿ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185% ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. 2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿಮಾಡಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…