#ಬಜೆಟ್ ಸುದ್ದಿ| ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ | ಎತ್ತಿನಹೊಳೆ ಯೋಜನೆಗೆ 3000 ಕೋಟಿ |

March 4, 2022
2:48 PM

ಈ ಬಾರಿಯ ಬಜೆಟ್‌ನಲ್ಲಿ ನೀರಾವರಿ ಯೋಜನೆಗಳಿಗೆ ಸಾಕಷ್ಟು ಅನುದಾನ ಮೀಸಲಿಡಲಾಗಿದೆ. ಮೇಕೆದಾಟು ಯೋಜನೆಗೆ ಸಿಎಂ 1000 ಕೋಟಿ ರೂ ಹಾಗೂ ಕೃಷ್ಣಾ ಮೇಲ್ದಂಡೆ 3 ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1 ಸಾವಿರ ಕೋಟಿ ರೂಪಾಯಿ, ಎತ್ತಿನಹೊಳೆ ಯೋಜನೆಯ ಎರಡನೇ ಹಂತದ ಕಾಮಗಾರಿಗೆ 3 ಸಾವಿರ ಕೋಟಿ ರೂ ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗೆ ಸಾಕಷ್ಟು ವಿರೋಧಗಳು ಇದ್ದವು. ಎತ್ತಿನ ಹೊಳೆ ಯೋಜನೆ ರದ್ದು ಮಾಡುವಂತೆ ಬಿಜೆಪಿ ರಾಜ್ಯಾದ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಅನೇಕರು  ಪ್ರತಿಭಟನೆ, ಹೋರಾಟ ನಡೆಸಿದ್ದರು. ಮಂಗಳೂರಿನಿಂದ ಪಾದಯಾತ್ರೆ, ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ಎತ್ತಿನಹೊಳೆಗೆ ಕಾಲ್ನಡಿಗೆ ಕೂಡಾ ನಡೆದಿತ್ತು. ಇದೀಗ ಮತ್ತೆ ಎರಡನೇ ಹಂತದ ಕಾಮಗಾರಿಗೆ ಬಜೆಟಲ್ಲಿ ಅನುದಾನ ಮೀಸಲಿಡಲಾಗಿದೆ.

ಮೇಕೆ ದಾಟು ವಿಚಾರದಲ್ಲೂ ಕಾಂಗ್ರೆಸ್‌ ಪ್ರತಿಭಟನೆ, ಪಾದಯಾತ್ರೆ ನಡೆಸುತ್ತಿರುವಂತೆಯೇ ಇದೀಗ ಬಜೆಟಲ್ಲಿ 1000 ಕೋಟಿ ರೂಪಾಯಿ ಮೀಸಲಿಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror