ಈ ಬಾರಿಯ ಬಜೆಟ್ನಲ್ಲಿ ನೀರಾವರಿ ಯೋಜನೆಗಳಿಗೆ ಸಾಕಷ್ಟು ಅನುದಾನ ಮೀಸಲಿಡಲಾಗಿದೆ. ಮೇಕೆದಾಟು ಯೋಜನೆಗೆ ಸಿಎಂ 1000 ಕೋಟಿ ರೂ ಹಾಗೂ ಕೃಷ್ಣಾ ಮೇಲ್ದಂಡೆ 3 ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1 ಸಾವಿರ ಕೋಟಿ ರೂಪಾಯಿ, ಎತ್ತಿನಹೊಳೆ ಯೋಜನೆಯ ಎರಡನೇ ಹಂತದ ಕಾಮಗಾರಿಗೆ 3 ಸಾವಿರ ಕೋಟಿ ರೂ ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗೆ ಸಾಕಷ್ಟು ವಿರೋಧಗಳು ಇದ್ದವು. ಎತ್ತಿನ ಹೊಳೆ ಯೋಜನೆ ರದ್ದು ಮಾಡುವಂತೆ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಅನೇಕರು ಪ್ರತಿಭಟನೆ, ಹೋರಾಟ ನಡೆಸಿದ್ದರು. ಮಂಗಳೂರಿನಿಂದ ಪಾದಯಾತ್ರೆ, ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ಎತ್ತಿನಹೊಳೆಗೆ ಕಾಲ್ನಡಿಗೆ ಕೂಡಾ ನಡೆದಿತ್ತು. ಇದೀಗ ಮತ್ತೆ ಎರಡನೇ ಹಂತದ ಕಾಮಗಾರಿಗೆ ಬಜೆಟಲ್ಲಿ ಅನುದಾನ ಮೀಸಲಿಡಲಾಗಿದೆ.
ಮೇಕೆ ದಾಟು ವಿಚಾರದಲ್ಲೂ ಕಾಂಗ್ರೆಸ್ ಪ್ರತಿಭಟನೆ, ಪಾದಯಾತ್ರೆ ನಡೆಸುತ್ತಿರುವಂತೆಯೇ ಇದೀಗ ಬಜೆಟಲ್ಲಿ 1000 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…