ರಾಜ್ಯದ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣಾ ಚಟುವಟಿಕೆಗಳನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು…!, ಪುನಃ ಸ್ಮಾರ್ಟ್ ಸೆಂಟೆನ್ಸ್ ಹಾಕಿ ಚೆಂಡನ್ನು ಕೇಂದ್ರದ ಅಂಗಳಕ್ಕೆ ಒದೆಯಲಾಗಿದೆ!. ಮಲೆನಾಡಿನ ಕೃಷಿಕ ಅರವಿಂದ್ ಸಿಗದಾಳ್, ಮೇಲುಕೊಪ್ಪ ಅವರು ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯದ ತುಂಬಾ ಕ್ರಿಟಿಕಲ್ ಪರಿಸ್ಥಿತಿಯಲ್ಲಿ “ಆಸ್ಪತ್ರೆಯಲ್ಲಿ ಏನೂ ಮಾಡಕಾಗಲ್ಲ, ಡಿಸ್ಚಾರ್ಜ್ ಮಾಡಿ ಮನೆಗೆ ಕರ್ಕೊಂಡು ಹೋಗಿ. ಇನ್ನೆಷ್ಟು ದಿನ ಇರ್ತಾರೆ ಅಂತ ಹೇಳೋಕಾಗಲ್ಲ. ದೇವರ ಮೇಲೆ ಬಾರ ಹಾಕಿ ಪ್ರಾರ್ಥನೆ ಮಾಡಿ.” ಅಂತಾರಲ್ಲ ಹಾಗೆ!!!.
ಸ್ಟೇಟ್ ಡಾಕ್ಟರ್, ಸೆಂಟ್ರಲ್ ಸರ್ಜನ್ ಇಬ್ಬರೂ ಅಡಿಕೆ ಎಲೆ ಚುಕ್ಕಿ, ಹಳದಿ ರೋಗದ ಬಗ್ಗೆ ಪರೋಕ್ಷವಾಗಿ ಅಂತಿಮ ತೀರ್ಮಾನ ಹೇಳಿಯಾಗಿದೆ. ಮಲೆನಾಡು-ಕರಾವಳಿಗಳಲ್ಲಿ ರೋಗಿಷ್ಟ ಅಡಿಕೆಯ ಮಾನ-ಪ್ರಾಣ ಎರಡೂ ಕೊನೇ ಉಸಿರನ್ನು ಎಣಿಸುತ್ತಿವೆ. ಬಅಡಿಕೆ ತೋಟಗಳ ಒಂದೆರಡು ಫೋಟೋ ತೆಗೆದು ಇಟ್ಕೊಂಡಿರಿ..!. ಸಂಬಂಧಿಕರಿಗೆಲ್ಲ ವಿಷಯ ತಿಳಿಸಿರಿ!.
ಹೀಗೆ ಆಗಿದೆ ಮಲೆನಾಡು ಹಾಗೂ ಕರಾವಳಿಯ ಅಡಿಕೆ ಬೆಳೆಗಾರ ಸ್ಥಿತಿ. ಅಡಿಕೆ ಬೆಳೆಗಾರರಿಗೆ ರಾಜ್ಯದಿಂದಲೂ, ಕೇಂದ್ರದಿಂದಲೂ ಸೂಕ್ತವಾದ ನ್ಯಾಯ ದೊರೆಯುತ್ತಿಲ್ಲ.
ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..
ಕೃಷಿಯಲ್ಲಿ ಡ್ರೋನ್ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…
ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.