Advertisement
City mirror

ನಾಳೆ ಕರ್ನಾಟಕ ಬಂದ್ | ಸಾರ್ವಜನಿಕರಿಗೆ ಆತಂಕ ಬೇಡ | ಸಮಸ್ಯೆಯಾದರೆ ಕರೆ ಮಾಡಲು ಪೊಲೀಸ್‌ ಇಲಾಖೆ ಸೂಚನೆ

Share

ಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ತಿದ್ದುಪಡಿ ಕಾಯಿದೆಗಳಾದ ಭೂ-ಸುಧಾರಣೆ, ಎಪಿಎಂಸಿ, ವಿದ್ಯುತ್ ಖಾಸಗೀಕರಣ ಮಸೂದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಕರ್ನಾಟಕ ಪ್ರಾಂತ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಆಲ್ ಇಂಡಿಯ ಕಿಸಾನ್ ಸಭಾ, ರೈತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಜನಶಕ್ತಿ ಹಾಗೂ ಇನ್ನಿತರೆ ರೈತ ಸಂಘಟನೆಗಳು ಜಂಟಿಯಾಗಿ ಆಯಾ ಸ್ಥಳೀಯ ಮುಖಂಡರುಗಳ ನೇತೃತ್ವದಲ್ಲಿ ಸೆ.28 ರಂದು “ಕರ್ನಾಟಕ ಬಂದ್”ಗೆ ಕರೆ ನೀಡಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಬಂದ್ ವೇಳೆ ಯಾವುದೇ ಅಹಿತಕರ
ಘಟನೆಗಳು ನಡೆಯದಂತೆ ಪೊಲೀಸ್‌ ಇಲಾಖೆ ಬಂದೋಬಸ್ತ್‌ ಕೈಗೊಂಡಿದೆ. ‌

ಸಮಸ್ಯೆಯಾದರೆ ಪೊಲೀಸರಿಗೆ ಕರೆ ಮಾಡಿ
ಈ ಸಂದರ್ಭ ಸಾರ್ವಜನಿಕರು ಯಾವುದೇ ಅತಂಕಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸುವಂತೆ ಹಾಗೂ ಬಲವಂತವಾಗಿ ಯಾರಾದರೂ ಬಂದ್ ಮಾಡಲು  ಪ್ರಯತ್ನಿಸಿದ್ದಲ್ಲಿ ಅಥವಾ ಒತ್ತಾಯಿಸಿದ್ದಲ್ಲಿ ಜಿಲ್ಲಾ ನಿಯಂತ್ರಣ ಕೊಠಡಿ ಇವರಿಗೆ ದೂರವಾಣಿ ಸಂಖ್ಯೆ 0824- 2220508 ಗೆ ಕರೆ ಮಾಡಿ ತಿಳಿಸುವಂತೆ ವಿನಂತಿಸಿದೆ. ಇದೇ ವೇಳೆ ಕೋವಿಡ್-19 ತಡೆಗಾಗಿ ಇರುವ ನಿಯಾಮಾವಳಿಗಳನ್ನು ಉಲ್ಲಂಘಿಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಇಲಾಖೆ ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

5 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

13 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

14 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

23 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago