ಸಿಇಟಿ ಫಲಿತಾಂಶ ಪ್ರಕಟ, ಬಾಲಕಿಯರದ್ದೇ ಮೇಲುಗೈ |

June 15, 2023
10:29 AM

ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಚಾತಕ ಪಕ್ಷಿಯಂತೆ ಎದೆ ಹಿಡಿದುಕೊಂಡು ಕಾಯುತ್ತಿದ್ದ ವಿದ್ಯಾರ್ಥಿಗಳ ಸಿಇಟಿ ಫಲಿತಾಶ ಇಂದು ಪ್ರಕಟಗೊಂಡಿದೆ. 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ ಎಂದು ಮಾಹಿತಿ ನೀಡಿದರು.

  • ಇಂಜಿನಿಯರಿಂಗ್ ಕೋರ್ಸಿಗೆ- 2,03,381
  • ಕೃಷಿ ವಿಜ್ಞಾನ ಕೋರ್ಸಿಗೆ- 1,64,187
  • ಪಶುಸಂಗೋಪನೆ- 166756
  • ಯೋಗ ಮತ್ತು ನ್ಯಾಚುರೋಪತಿ ಗೆ- 2,06191
  • ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ- 2,06,340
  • ನರ್ಸಿಂಗ್ ಕೋರ್ಸಿಗೆ – 1,66,808 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ

ನ್ಯಾಚೂರೋಪತಿ ಟಾಪರ್​ : ನ್ಯಾಚೂರೋಪತಿ ಹಾಗೂ ಯೋಗದಲ್ಲಿ ಪ್ರತೀಕ್ಷಾ ಟಾಪ್ ಆಗಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಕುಮಾರನ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಪ್ರತೀಕ್ಷಾ, 98.661 ಅಂಕ ಪಡೆದು ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾಳೆ.

ಕೃಷಿ ವಿಜ್ಞಾನ ವಿಭಾಗದಲ್ಲಿ ಬೈರೇಶ್​ಗೆ ಮೊದಲ ರ‍್ಯಾಂಕ್‌ಅಗ್ರಿಕಲ್ಚರ್(ಕೃಷಿ ವಿಜ್ಞಾನ )ವಿಭಾಗದಲ್ಲಿ ಬೈರೇಶ್ ಎಸ್ ಎಚ್ ಮೊದಲ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ಮಂಗಳೂರಿ ಎಕ್ಸ್ ಪರ್ಟ್ ಯುನಿವರ್ಸಿಟಿ ಕಾಲೇಜ್ ವಿದ್ಯಾರ್ಥಿಯಾಗಿರುವ ಬೈರೇಶ್, ಕ್ವಾಲಿಫಿಕೇಷನ್​ನಲ್ಲಿ 99.75 ಅಂಕ, ಸಿಟಿಟಿಯಲ್ಲಿ 93.75 ಅಂಕ ಪಡೆದು ಮೊದಲ ರ್ಯಾಂಕ್ ಪಡೆದಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಹಾಗೂ 21ರಂದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ, ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್​ ಹಾಗೂ ಬಿಎಸ್ಸಿ ನರ್ಸಿಂಗ್​ಗೆ ಪ್ರವೇಶ ಪರೀಕ್ಷೆ ನಡೆಸಿತ್ತು. ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.ವೆಬ್​ಸೈಟ್​ನಲ್ಲಿ ಬೆಳಗ್ಗೆ 11 ಗಂಟೆ ನಂತರ ಫಲಿತಾಂಶ ಲಭ್ಯವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror