Advertisement
ಸುದ್ದಿಗಳು

ಸಿಇಟಿ ಫಲಿತಾಂಶ ಪ್ರಕಟ, ಬಾಲಕಿಯರದ್ದೇ ಮೇಲುಗೈ |

Share

ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಚಾತಕ ಪಕ್ಷಿಯಂತೆ ಎದೆ ಹಿಡಿದುಕೊಂಡು ಕಾಯುತ್ತಿದ್ದ ವಿದ್ಯಾರ್ಥಿಗಳ ಸಿಇಟಿ ಫಲಿತಾಶ ಇಂದು ಪ್ರಕಟಗೊಂಡಿದೆ. 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ ಎಂದು ಮಾಹಿತಿ ನೀಡಿದರು.

Advertisement
  • ಇಂಜಿನಿಯರಿಂಗ್ ಕೋರ್ಸಿಗೆ- 2,03,381
  • ಕೃಷಿ ವಿಜ್ಞಾನ ಕೋರ್ಸಿಗೆ- 1,64,187
  • ಪಶುಸಂಗೋಪನೆ- 166756
  • ಯೋಗ ಮತ್ತು ನ್ಯಾಚುರೋಪತಿ ಗೆ- 2,06191
  • ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ- 2,06,340
  • ನರ್ಸಿಂಗ್ ಕೋರ್ಸಿಗೆ – 1,66,808 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ

ನ್ಯಾಚೂರೋಪತಿ ಟಾಪರ್​ : ನ್ಯಾಚೂರೋಪತಿ ಹಾಗೂ ಯೋಗದಲ್ಲಿ ಪ್ರತೀಕ್ಷಾ ಟಾಪ್ ಆಗಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಕುಮಾರನ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಪ್ರತೀಕ್ಷಾ, 98.661 ಅಂಕ ಪಡೆದು ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾಳೆ.

ಕೃಷಿ ವಿಜ್ಞಾನ ವಿಭಾಗದಲ್ಲಿ ಬೈರೇಶ್​ಗೆ ಮೊದಲ ರ‍್ಯಾಂಕ್‌ಅಗ್ರಿಕಲ್ಚರ್(ಕೃಷಿ ವಿಜ್ಞಾನ )ವಿಭಾಗದಲ್ಲಿ ಬೈರೇಶ್ ಎಸ್ ಎಚ್ ಮೊದಲ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ಮಂಗಳೂರಿ ಎಕ್ಸ್ ಪರ್ಟ್ ಯುನಿವರ್ಸಿಟಿ ಕಾಲೇಜ್ ವಿದ್ಯಾರ್ಥಿಯಾಗಿರುವ ಬೈರೇಶ್, ಕ್ವಾಲಿಫಿಕೇಷನ್​ನಲ್ಲಿ 99.75 ಅಂಕ, ಸಿಟಿಟಿಯಲ್ಲಿ 93.75 ಅಂಕ ಪಡೆದು ಮೊದಲ ರ್ಯಾಂಕ್ ಪಡೆದಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಹಾಗೂ 21ರಂದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ, ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್​ ಹಾಗೂ ಬಿಎಸ್ಸಿ ನರ್ಸಿಂಗ್​ಗೆ ಪ್ರವೇಶ ಪರೀಕ್ಷೆ ನಡೆಸಿತ್ತು. ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.ವೆಬ್​ಸೈಟ್​ನಲ್ಲಿ ಬೆಳಗ್ಗೆ 11 ಗಂಟೆ ನಂತರ ಫಲಿತಾಂಶ ಲಭ್ಯವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

11 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago