Advertisement
ಸುದ್ದಿಗಳು

ಸಿಇಟಿ ಫಲಿತಾಂಶ ಪ್ರಕಟ, ಬಾಲಕಿಯರದ್ದೇ ಮೇಲುಗೈ : ರಿಸಲ್ಟ್ ಚೆಕ್‌ ಮಾಡಲು ಇಲ್ಲಿದೆ ಲಿಂಕ್

Share

ಮುಂಮದಿನ ಭವಿಷ್ಯ ಕಟ್ಟಿಕೊಳ್ಳಲು ಚಾತಕ ಪಕ್ಷಿಯಂತೆ ಎದೆ ಹಿಡಿದುಕೊಂಡು ಕಾಯುತ್ತಿದ್ದ ವಿದ್ಯಾರ್ಥಿಗಳ ಸಿಇಟಿ ಫಲಿತಾಶ ಿಂದು ಪ್ರಕಟಗೊಂಡಿದೆ. 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ (KCET Results) ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಇಂಜಿನಿಯರಿಂಗ್ ವಿಭಾಗದಲ್ಲಿ ಒಟ್ಟು 10 ಜನ ವಿಧ್ಯಾರ್ಥಿ ಗಳು ಟಾಪಾರ್ ಬಂದಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ. ಇವರು ಕ್ವಾಲಿಫೈ ಪರೀಕ್ಷೆಯಲ್ಲಿ 99.667 ಅಂಕ ಕಳಿಸಿದ್ದು, ಸಿಟಿಇಯಲ್ಲಿ 96.111 ಅಂಕ ಪಡೆಯುವುದರೊಂದಿಗೆ ಒಟ್ಟು 97.111 ಪರ್ಸೆಂಟೇಜ್ ಮಾಡಿದ್ದಾರೆ. ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ​ ಇನ್ನು ತೃತೀಯ  ಸ್ಥಾನವನ್ನು ಮೃದ್ಧ್​ ಶೆಟ್ಟಿ ಹಾಗೂ ಎಸ್.ಸುಮೇಧ್​ಗೆ 4ನೇ ಸ್ಥಾನ ಪಡೆದುಕೊಂಡಿದ್ದರೆ, ಮಾಧವ ಸೂರ್ಯಗೆ 5ನೇ ಸ್ಥಾನ ಲಭಿಸಿದೆ.

  • ಇಂಜಿನಿಯರಿಂಗ್ ಕೋರ್ಸಿಗೆ- 2,03,381
  • ಕೃಷಿ ವಿಜ್ಞಾನ ಕೋರ್ಸಿಗೆ- 1,64,187
  • ಪಶುಸಂಗೋಪನೆ- 166756
  • ಯೋಗ ಮತ್ತು ನ್ಯಾಚುರೋಪತಿ ಗೆ- 2,06191
  • ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ- 2,06,340
  • ನರ್ಸಿಂಗ್ ಕೋರ್ಸಿಗೆ – 1,66,808 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ

ನ್ಯಾಚೂರೋಪತಿ ಟಾಪರ್​

ನ್ಯಾಚೂರೋಪತಿ ಹಾಗೂ ಯೋಗದಲ್ಲಿ ಪ್ರತೀಕ್ಷಾ ಟಾಪ್ ಆಗಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಕುಮಾರನ್ ಪಿಯು ಕಾಲೇಜಲಜಿನ ವಿದ್ಯಾರ್ಥಿನಿಯಾಗಿರುವ ಪ್ರತೀಕ್ಷಾ, 98.661 ಅಂಕ ಪಡೆದು ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾಳೆ.

ಕೃಷಿ ವಿಜ್ಞಾನ ವಿಭಾಗದಲ್ಲಿ ಬೈರೇಶ್​ಗೆ ಮೊದಲ ರ್ಯಾಂಕ್

ಅಗ್ರಿಕಲ್ಚರ್(ಕೃಷಿ ವಿಜ್ಞಾನ )ವಿಭಾಗದಲ್ಲಿ ಬೈರೇಶ್ ಎಸ್ ಎಚ್ ಮೊದಲ ರ್ಯಾಂಕ್ ಪಡೆದುಕೊಂಡಿದ್ದಾರೆ. ಮಂಗಳೂರಿ ಎಕ್ಸ್ ಪರ್ಟ್ ಯುನಿವರ್ಸಿಟಿ ಕಾಲೇಜ್ ವಿದ್ಯಾರ್ಥಿಯಾಗಿರುವ ಬೈರೇಶ್, ಕ್ವಾಲಿಫಿಕೇಷನ್​ನಲ್ಲಿ 99.75 ಅಂಕ, ಸಿಟಿಟಿಯಲ್ಲಿ 93.75 ಅಂಕ ಪಡೆದು ಮೊದಲ ರ್ಯಾಂಕ್ ಪಡೆದಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಹಾಗೂ 21ರಂದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ, ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್​ ಹಾಗೂ ಬಿಎಸ್ಸಿ ನರ್ಸಿಂಗ್​ಗೆ ಪ್ರವೇಶ ಪರೀಕ್ಷೆ ನಡೆಸಿತ್ತು. ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

karresults.nic.in ಹಾಗೂ cetonline.karnataka.gov.in ವೆಬ್​ಸೈಟ್​ನಲ್ಲಿ ಬೆಳಗ್ಗೆ 11 ಗಂಟೆ ನಂತರ ಫಲಿತಾಂಶ ಲಭ್ಯವಾಗಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

20 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

20 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

21 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago