ರಾಜ್ಯದ ಎಲ್ಲಾ ರಾಸಾಯನಿಕ ಕಾರ್ಖಾನೆಗಳ ಮೇಲೆ ಹೆಚ್ಚಿನ ನಿಗಾವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಘಟಕ (ಎನ್ಸಿಬಿ) ಇತ್ತೀಚೆಗೆ ಮೈಸೂರಿನಲ್ಲಿ ನಡೆಸಿದ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ನಡೆಯುತ್ತಿರುವ ಭದ್ರತಾ ಪರಿಶೀಲನೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಭಾಗವಾಗಿ, ಸಂಶಯಾಸ್ಪದ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಇದೇ ವೇಳೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಹರಿದಾಡುತ್ತಿರುವ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಡಾ. ಪರಮೇಶ್ವರ್, “ಹೈಕಮಾಂಡ್ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದೆ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ” ಎಂದು ಹೇಳಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…