ರಾಜ್ಯದ ಎಲ್ಲಾ ರಾಸಾಯನಿಕ ಕಾರ್ಖಾನೆಗಳ ಮೇಲೆ ಹೆಚ್ಚಿನ ನಿಗಾವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಘಟಕ (ಎನ್ಸಿಬಿ) ಇತ್ತೀಚೆಗೆ ಮೈಸೂರಿನಲ್ಲಿ ನಡೆಸಿದ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ನಡೆಯುತ್ತಿರುವ ಭದ್ರತಾ ಪರಿಶೀಲನೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಭಾಗವಾಗಿ, ಸಂಶಯಾಸ್ಪದ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಇದೇ ವೇಳೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಹರಿದಾಡುತ್ತಿರುವ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಡಾ. ಪರಮೇಶ್ವರ್, “ಹೈಕಮಾಂಡ್ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದೆ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ” ಎಂದು ಹೇಳಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…