ಸುದ್ದಿಗಳು

ಮತ್ತೆ ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್‌ ಡಿಸಿಎಂ | ಅಧಿಕೃತ ಘೋಷಣೆ ಬಾಕಿ | ನಾಳೆಯೇ ಕರ್ನಾಟಕದ ಸಿಎಂ ಪ್ರಮಾಣವಚನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವಿನ ಕುರ್ಚಿ ಕದನ ಬಹುತೇಕ ಅಂತ್ಯವಾಗಿದ್ದು, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದೆ. ಗುರುವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ರಾಜ್ಯಪಾಲ ಥೋವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.

Advertisement

ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್‌ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಅಷ್ಟೇ ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್‌ ಅವರೇ ಮುಂದುವರಿಯುವ ಸಾಧ್ಯತೆಯಿದೆ.

ಪೂರ್ಣಾವಧಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ 50:50 ಸೂತ್ರದ ಅಧಿಕಾರ ಹಂಚಿಕೆಗೆ ಸಿದ್ದರಿದ್ದಾರೆ. 2 ವರ್ಷದ ಅವಧಿಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದು ಮತ್ತು ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುವುದು.

ಲೋಕಸಭಾ ಚುನಾವಣೆಯ ನಂತರವೂ ಒಂದು ವರ್ಷ ಅವರನ್ನು ಮುಂದುವರಿಸಿ ಕೊನೆಯ ಮೂರು ವರ್ಷ ಡಿಕೆಶಿ ಅವರಿಗೆ ಸಿಎಂ ಪಟ್ಟ ನೀಡಿ 2028ರಲ್ಲಿ ಡಿಕೆಶಿ ಮೂಲಕ ಚುನಾವಣೆ ಎದುರಿಸುವ ಅವಕಾಶ ನೀಡಲು ಹೈಕಮಾಂಡ್‌ ಮುಂದಾಗಿದೆ. ಆ ಚುನಾವಣೆ ಗೆದ್ದರೆ ಡಿಕೆಶಿ ಮತ್ತೆ 5 ವರ್ಷ ಸಿಎಂ ಆಗಿ ಮುಂದುವರಿಯಬಹುದು ಎಂಬ ಸೂತ್ರವನ್ನು ಇಬ್ಬರು ನಾಯಕರ ಮುಂದಿಟ್ಟಿದೆ.

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 26-03-2025 | ಇಂದೂ ಕೆಲವು ಕಡೆ ಗಾಳಿ ಸಹಿತ ಮಳೆ ಸಾಧ್ಯತೆ | ಮಾ.27 ರಿಂದ ಮಳೆ ಕಡಿಮೆ |

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ…

10 hours ago

ಸಾಕೆನ್ನಿಸದಷ್ಟು ಎತ್ತರದ ಅಪೇಕ್ಷೆಗಳು, ಜೀವನವೇ ಸಾಕೆನ್ನಿಸುವ ಸಾವುಗಳು

ವಾಸ್ತವಿಕವಾಗಿ ಈ ಪ್ರಪಂಚದಲ್ಲಿ ಯಾರೂ ಏಕಾಂಗಿಗಳಲ್ಲ. ನಮಗೆ ಯಾವುದೇ ಸ್ವಂತ ನಿರ್ಧಾರಗಳ ಸಮರ್ಪಕತೆಯನ್ನು…

14 hours ago

ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರ | ಬದು ನಿರ್ಮಾಣದಿಂದ ಮಳೆ ನೀರು ಪೋಲು ನಿಯಂತ್ರಣ |

ಜಲಸಂರಕ್ಷಣೆಗೆ ವಿವಿಧ ಪ್ರಯತ್ನ ನಡೆಯುತ್ತಿದೆ. ತಾಪಮಾನ ಏರಿಕೆಯಾದಂತೆ ಅಂತರ್ಜಲಮಟ್ಟವೂ ಕುಸಿತವಾಗುತ್ತಿದೆ. ಇಂತಹ ಸಮಯದಲ್ಲಿ…

16 hours ago

ಹಾಸನ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ | ಸೆರೆ ಹಿಡಿದ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ

ಹಾಸನ ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನರಿಗೆ ಆತಂಕ ಸೃಷ್ಟಿಸಿದ್ದ ಎರಡು ಕಾಡಾನೆಗಳನ್ನು ಸೆರೆಹಿಡಿದು…

17 hours ago

ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಒತ್ತುವರಿ ತೆರವು  ಕಾರ್ಯಾಚರಣೆ

ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಒತ್ತುವರಿ ತೆರವು …

17 hours ago

ಕೃಷಿ ವಿಜ್ಞಾನ ಕೇಂದ್ರದಲ್ಲಿ  ಸಸ್ಯ ತಳಿಗಳ ಸಂರಕ್ಷಣೆ ತರಬೇತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ…

17 hours ago