ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಬಹುತೇಕ ಅಂತ್ಯವಾಗಿದ್ದು, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದೆ. ಗುರುವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ರಾಜ್ಯಪಾಲ ಥೋವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.
ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಅಷ್ಟೇ ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್ ಅವರೇ ಮುಂದುವರಿಯುವ ಸಾಧ್ಯತೆಯಿದೆ.
ಪೂರ್ಣಾವಧಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ 50:50 ಸೂತ್ರದ ಅಧಿಕಾರ ಹಂಚಿಕೆಗೆ ಸಿದ್ದರಿದ್ದಾರೆ. 2 ವರ್ಷದ ಅವಧಿಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದು ಮತ್ತು ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುವುದು.
ಲೋಕಸಭಾ ಚುನಾವಣೆಯ ನಂತರವೂ ಒಂದು ವರ್ಷ ಅವರನ್ನು ಮುಂದುವರಿಸಿ ಕೊನೆಯ ಮೂರು ವರ್ಷ ಡಿಕೆಶಿ ಅವರಿಗೆ ಸಿಎಂ ಪಟ್ಟ ನೀಡಿ 2028ರಲ್ಲಿ ಡಿಕೆಶಿ ಮೂಲಕ ಚುನಾವಣೆ ಎದುರಿಸುವ ಅವಕಾಶ ನೀಡಲು ಹೈಕಮಾಂಡ್ ಮುಂದಾಗಿದೆ. ಆ ಚುನಾವಣೆ ಗೆದ್ದರೆ ಡಿಕೆಶಿ ಮತ್ತೆ 5 ವರ್ಷ ಸಿಎಂ ಆಗಿ ಮುಂದುವರಿಯಬಹುದು ಎಂಬ ಸೂತ್ರವನ್ನು ಇಬ್ಬರು ನಾಯಕರ ಮುಂದಿಟ್ಟಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…