ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಬಹುತೇಕ ಅಂತ್ಯವಾಗಿದ್ದು, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದೆ. ಗುರುವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ರಾಜ್ಯಪಾಲ ಥೋವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.
ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಅಷ್ಟೇ ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್ ಅವರೇ ಮುಂದುವರಿಯುವ ಸಾಧ್ಯತೆಯಿದೆ.
ಪೂರ್ಣಾವಧಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ 50:50 ಸೂತ್ರದ ಅಧಿಕಾರ ಹಂಚಿಕೆಗೆ ಸಿದ್ದರಿದ್ದಾರೆ. 2 ವರ್ಷದ ಅವಧಿಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದು ಮತ್ತು ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುವುದು.
ಲೋಕಸಭಾ ಚುನಾವಣೆಯ ನಂತರವೂ ಒಂದು ವರ್ಷ ಅವರನ್ನು ಮುಂದುವರಿಸಿ ಕೊನೆಯ ಮೂರು ವರ್ಷ ಡಿಕೆಶಿ ಅವರಿಗೆ ಸಿಎಂ ಪಟ್ಟ ನೀಡಿ 2028ರಲ್ಲಿ ಡಿಕೆಶಿ ಮೂಲಕ ಚುನಾವಣೆ ಎದುರಿಸುವ ಅವಕಾಶ ನೀಡಲು ಹೈಕಮಾಂಡ್ ಮುಂದಾಗಿದೆ. ಆ ಚುನಾವಣೆ ಗೆದ್ದರೆ ಡಿಕೆಶಿ ಮತ್ತೆ 5 ವರ್ಷ ಸಿಎಂ ಆಗಿ ಮುಂದುವರಿಯಬಹುದು ಎಂಬ ಸೂತ್ರವನ್ನು ಇಬ್ಬರು ನಾಯಕರ ಮುಂದಿಟ್ಟಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…