ಪ್ರತಿಕ್ರಿಯೆ ನೀಡದ ಸಿದ್ದರಾಮಯ್ಯ : ಫುಲ್ ಗರಂ ಆಗಿ ತೆರಳಿದ ಸಿದ್ದು

May 15, 2023
9:49 AM

ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.

ಈ ಕುತೂಹಲ ಮೂಡಲು ಕಾರಣ ಕಾಂಗ್ರೆಸ್ (ಕಾಂಗ್ರೆಸ್) ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಿತು ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30 ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.

ಖಾಸಗಿ ಹೋಟೆಲ್‌ನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ  ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗು ಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು.  

ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.

ಹುಟ್ಟುಹಬ್ಬದ ಭಾರೀ ಸಂಖ್ಯೆಯ ಡಿಕೆ ಶಿವಕುಮಾರ್ ಅಭಿಮಾನಿಗಳು ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದಾರೆ. ಅಭಿಮಾನಿಗಳಿಗೆ ಡಿಕೆಶಿಗೆ ಜೈಕಾರ ಹಾಕಿ  ಸಿಎಂ ಪಟ್ಟ ಕೊಡಬೇಕು ಎಂದು ಘೋಷಣೆ ಕೂಗಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ
ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?
July 4, 2026
12:59 PM
by: ದ ರೂರಲ್ ಮಿರರ್.ಕಾಂ
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ
July 4, 2026
12:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror