ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.
ಈ ಕುತೂಹಲ ಮೂಡಲು ಕಾರಣ ಕಾಂಗ್ರೆಸ್ (ಕಾಂಗ್ರೆಸ್) ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಯಿತು ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30 ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.
ಖಾಸಗಿ ಹೋಟೆಲ್ನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗು ಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು.
ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…