ಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ

May 16, 2023
11:47 AM

ಚುನಾವಣೆ ಮುಗಿದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ ಮಾಡಿದ್ದಾರೆ.

ಸೋಮವಾರ ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ಬಂದಿರುವ ಸಿದ್ದರಾಮಯ್ಯ ರಾಜಕೀಯ ಒತ್ತಡದ ಮಧ್ಯೆ ತಮ್ಮ ಆಪ್ತ ಶಾಸಕರ ಜೊತೆ ರಾತ್ರಿ ಡಿನ್ನರ್‌ ಮಾಡಿದ್ದಾರೆ. ಎಂ.ಬಿ.ಪಾಟೀಲ್, ಜಮೀರ್, ಬೈರತಿ ಸುರೇಶ್, ಅನಿಲ್ ಚಿಕ್ಕಮಾಧು, ಕೆ.ಜೆ.ಜಾರ್ಜ್, ಪುತ್ರ ಯತೀಂದ್ರ ಸಾಥ್ ನೀಡಿದ್ದಾರೆ.

ಈ ವೇಳೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಪ್ರವಾಸಕ್ಕೆ ತೆರಳಿದ ಸೋನಿಯಾ ಗಾಂಧಿ ಇಂದು ದೆಹಲಿ ಆಗಮಿಸಲಿದ್ದಾರೆ. ಇಂದು ಡಿಕೆ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಸಮ್ಮುಖದಲ್ಲೇ ಖರ್ಗೆ ನಿವಾಸದಲ್ಲೇ ಬ್ಯಾಲೆಟ್‌ ಬಾಕ್ಸ್‌ ತೆರೆಯಲಾಗುತ್ತದೆ. ಶಾಸಕರು ಯಾರಿಗೆ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೋ ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆಯಿದೆ. ಇದಾದ ಬಳಿಕ ಇಬ್ಬರ ಜೊತೆ ಸಂಧಾನ ಸಭೆ ನಡೆದು ಸಿಎಂ ಯಾರಾಗಬೇಕು ಎಂಬ ನಿರ್ಧಾರ ಅಂತಿಮವಾಗಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror