ಚುನಾವಣೆ ಮುಗಿದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ ಮಾಡಿದ್ದಾರೆ.
ಸೋಮವಾರ ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ಬಂದಿರುವ ಸಿದ್ದರಾಮಯ್ಯ ರಾಜಕೀಯ ಒತ್ತಡದ ಮಧ್ಯೆ ತಮ್ಮ ಆಪ್ತ ಶಾಸಕರ ಜೊತೆ ರಾತ್ರಿ ಡಿನ್ನರ್ ಮಾಡಿದ್ದಾರೆ. ಎಂ.ಬಿ.ಪಾಟೀಲ್, ಜಮೀರ್, ಬೈರತಿ ಸುರೇಶ್, ಅನಿಲ್ ಚಿಕ್ಕಮಾಧು, ಕೆ.ಜೆ.ಜಾರ್ಜ್, ಪುತ್ರ ಯತೀಂದ್ರ ಸಾಥ್ ನೀಡಿದ್ದಾರೆ.
ಈ ವೇಳೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಪ್ರವಾಸಕ್ಕೆ ತೆರಳಿದ ಸೋನಿಯಾ ಗಾಂಧಿ ಇಂದು ದೆಹಲಿ ಆಗಮಿಸಲಿದ್ದಾರೆ. ಇಂದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸಮ್ಮುಖದಲ್ಲೇ ಖರ್ಗೆ ನಿವಾಸದಲ್ಲೇ ಬ್ಯಾಲೆಟ್ ಬಾಕ್ಸ್ ತೆರೆಯಲಾಗುತ್ತದೆ. ಶಾಸಕರು ಯಾರಿಗೆ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೋ ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆಯಿದೆ. ಇದಾದ ಬಳಿಕ ಇಬ್ಬರ ಜೊತೆ ಸಂಧಾನ ಸಭೆ ನಡೆದು ಸಿಎಂ ಯಾರಾಗಬೇಕು ಎಂಬ ನಿರ್ಧಾರ ಅಂತಿಮವಾಗಲಿದೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…