ಚುನಾವಣೆ ಮುಗಿದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ ಮಾಡಿದ್ದಾರೆ.
ಸೋಮವಾರ ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ಬಂದಿರುವ ಸಿದ್ದರಾಮಯ್ಯ ರಾಜಕೀಯ ಒತ್ತಡದ ಮಧ್ಯೆ ತಮ್ಮ ಆಪ್ತ ಶಾಸಕರ ಜೊತೆ ರಾತ್ರಿ ಡಿನ್ನರ್ ಮಾಡಿದ್ದಾರೆ. ಎಂ.ಬಿ.ಪಾಟೀಲ್, ಜಮೀರ್, ಬೈರತಿ ಸುರೇಶ್, ಅನಿಲ್ ಚಿಕ್ಕಮಾಧು, ಕೆ.ಜೆ.ಜಾರ್ಜ್, ಪುತ್ರ ಯತೀಂದ್ರ ಸಾಥ್ ನೀಡಿದ್ದಾರೆ.
ಈ ವೇಳೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಪ್ರವಾಸಕ್ಕೆ ತೆರಳಿದ ಸೋನಿಯಾ ಗಾಂಧಿ ಇಂದು ದೆಹಲಿ ಆಗಮಿಸಲಿದ್ದಾರೆ. ಇಂದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸಮ್ಮುಖದಲ್ಲೇ ಖರ್ಗೆ ನಿವಾಸದಲ್ಲೇ ಬ್ಯಾಲೆಟ್ ಬಾಕ್ಸ್ ತೆರೆಯಲಾಗುತ್ತದೆ. ಶಾಸಕರು ಯಾರಿಗೆ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೋ ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆಯಿದೆ. ಇದಾದ ಬಳಿಕ ಇಬ್ಬರ ಜೊತೆ ಸಂಧಾನ ಸಭೆ ನಡೆದು ಸಿಎಂ ಯಾರಾಗಬೇಕು ಎಂಬ ನಿರ್ಧಾರ ಅಂತಿಮವಾಗಲಿದೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…