ಚುನಾವಣೆ ಮುಗಿದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ ಮಾಡಿದ್ದಾರೆ.
ಸೋಮವಾರ ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ಬಂದಿರುವ ಸಿದ್ದರಾಮಯ್ಯ ರಾಜಕೀಯ ಒತ್ತಡದ ಮಧ್ಯೆ ತಮ್ಮ ಆಪ್ತ ಶಾಸಕರ ಜೊತೆ ರಾತ್ರಿ ಡಿನ್ನರ್ ಮಾಡಿದ್ದಾರೆ. ಎಂ.ಬಿ.ಪಾಟೀಲ್, ಜಮೀರ್, ಬೈರತಿ ಸುರೇಶ್, ಅನಿಲ್ ಚಿಕ್ಕಮಾಧು, ಕೆ.ಜೆ.ಜಾರ್ಜ್, ಪುತ್ರ ಯತೀಂದ್ರ ಸಾಥ್ ನೀಡಿದ್ದಾರೆ.
ಈ ವೇಳೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಪ್ರವಾಸಕ್ಕೆ ತೆರಳಿದ ಸೋನಿಯಾ ಗಾಂಧಿ ಇಂದು ದೆಹಲಿ ಆಗಮಿಸಲಿದ್ದಾರೆ. ಇಂದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸಮ್ಮುಖದಲ್ಲೇ ಖರ್ಗೆ ನಿವಾಸದಲ್ಲೇ ಬ್ಯಾಲೆಟ್ ಬಾಕ್ಸ್ ತೆರೆಯಲಾಗುತ್ತದೆ. ಶಾಸಕರು ಯಾರಿಗೆ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೋ ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆಯಿದೆ. ಇದಾದ ಬಳಿಕ ಇಬ್ಬರ ಜೊತೆ ಸಂಧಾನ ಸಭೆ ನಡೆದು ಸಿಎಂ ಯಾರಾಗಬೇಕು ಎಂಬ ನಿರ್ಧಾರ ಅಂತಿಮವಾಗಲಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…