ಚುನಾವಣೆ ಮುಗಿದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ ಮಾಡಿದ್ದಾರೆ.
ಸೋಮವಾರ ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ಬಂದಿರುವ ಸಿದ್ದರಾಮಯ್ಯ ರಾಜಕೀಯ ಒತ್ತಡದ ಮಧ್ಯೆ ತಮ್ಮ ಆಪ್ತ ಶಾಸಕರ ಜೊತೆ ರಾತ್ರಿ ಡಿನ್ನರ್ ಮಾಡಿದ್ದಾರೆ. ಎಂ.ಬಿ.ಪಾಟೀಲ್, ಜಮೀರ್, ಬೈರತಿ ಸುರೇಶ್, ಅನಿಲ್ ಚಿಕ್ಕಮಾಧು, ಕೆ.ಜೆ.ಜಾರ್ಜ್, ಪುತ್ರ ಯತೀಂದ್ರ ಸಾಥ್ ನೀಡಿದ್ದಾರೆ.
ಈ ವೇಳೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಪ್ರವಾಸಕ್ಕೆ ತೆರಳಿದ ಸೋನಿಯಾ ಗಾಂಧಿ ಇಂದು ದೆಹಲಿ ಆಗಮಿಸಲಿದ್ದಾರೆ. ಇಂದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸಮ್ಮುಖದಲ್ಲೇ ಖರ್ಗೆ ನಿವಾಸದಲ್ಲೇ ಬ್ಯಾಲೆಟ್ ಬಾಕ್ಸ್ ತೆರೆಯಲಾಗುತ್ತದೆ. ಶಾಸಕರು ಯಾರಿಗೆ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೋ ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆಯಿದೆ. ಇದಾದ ಬಳಿಕ ಇಬ್ಬರ ಜೊತೆ ಸಂಧಾನ ಸಭೆ ನಡೆದು ಸಿಎಂ ಯಾರಾಗಬೇಕು ಎಂಬ ನಿರ್ಧಾರ ಅಂತಿಮವಾಗಲಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…