ಚುನಾವಣೆ ಮುಗಿದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ ಮಾಡಿದ್ದಾರೆ.
ಸೋಮವಾರ ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ಬಂದಿರುವ ಸಿದ್ದರಾಮಯ್ಯ ರಾಜಕೀಯ ಒತ್ತಡದ ಮಧ್ಯೆ ತಮ್ಮ ಆಪ್ತ ಶಾಸಕರ ಜೊತೆ ರಾತ್ರಿ ಡಿನ್ನರ್ ಮಾಡಿದ್ದಾರೆ. ಎಂ.ಬಿ.ಪಾಟೀಲ್, ಜಮೀರ್, ಬೈರತಿ ಸುರೇಶ್, ಅನಿಲ್ ಚಿಕ್ಕಮಾಧು, ಕೆ.ಜೆ.ಜಾರ್ಜ್, ಪುತ್ರ ಯತೀಂದ್ರ ಸಾಥ್ ನೀಡಿದ್ದಾರೆ.
ಈ ವೇಳೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಪ್ರವಾಸಕ್ಕೆ ತೆರಳಿದ ಸೋನಿಯಾ ಗಾಂಧಿ ಇಂದು ದೆಹಲಿ ಆಗಮಿಸಲಿದ್ದಾರೆ. ಇಂದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸಮ್ಮುಖದಲ್ಲೇ ಖರ್ಗೆ ನಿವಾಸದಲ್ಲೇ ಬ್ಯಾಲೆಟ್ ಬಾಕ್ಸ್ ತೆರೆಯಲಾಗುತ್ತದೆ. ಶಾಸಕರು ಯಾರಿಗೆ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೋ ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆಯಿದೆ. ಇದಾದ ಬಳಿಕ ಇಬ್ಬರ ಜೊತೆ ಸಂಧಾನ ಸಭೆ ನಡೆದು ಸಿಎಂ ಯಾರಾಗಬೇಕು ಎಂಬ ನಿರ್ಧಾರ ಅಂತಿಮವಾಗಲಿದೆ.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…