Advertisement
ಸುದ್ದಿಗಳು

ಮುಂದುವರಿದ ಸಿಎಂ ಫೈಟ್; ನನ್ನ ಬಳಿ 135 ಶಾಸಕರು ಇದ್ದಾರೆಂದ ಡಿಕೆ ಶಿವಕುಮಾರ್

Share

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದ ನಂತರದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಮುಂದುವರಿದಿದೆ. ಈ ಮಧ್ಯೆ, ಬಾಗಲೂರು ಬಳಿಯ ಫಾರ್ಮ್​ಹೌಸ್​ನಲ್ಲಿ ಡಿಕೆ ಶಿವಕುಮಾರ್ ಹಾಗೂ ಬೆಂಬಲಿಗರು ಸಭೆ ನಡೆಸಿದ್ದಾರೆ. ಅಲ್ಲಿ ಮಾತನಾಡಿದ ಶಿವಕುಮಾರ್, ಸಿಎಂ ಹುದ್ದೆಗೆ ಎಲ್ಲರೂ ಆಸೆ ಪಡಲಿ. ಆದರೆ, ನಾವು ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಅಂಗೀಕರಿಸಿದ್ದೇವೆ. ಯಾವ ಶಾಸಕರು ಏನು ಮಾಡಿದ್ದರೋ ನನಗೆ ಗೊತ್ತಿಲ್ಲ. ನನ್ನ ಬಳಿ 135 ಶಾಸಕರು ಇದ್ದಾರೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ.

ಬಳಿಕ ಅವರು ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದಾರೆ. ಈ ಬೆಳವಣಿಗೆಯ ಮಧ್ಯೆಯೇ, ಬೆಂಗಳೂರು ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಸಿ ಸಭೆ ನಡೆಸಲಾಗಿದೆ.

ಮತ್ತೊಂದೆಡೆ, ಸಿದ್ದರಾಮಯ್ಯ ಅವರು ಡಾ.ಯತೀಂದ್ರ, ಜಮೀರ್ ಅಹ್ಮದ್​ ಜತೆ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಅವರು ಹೈಕಮಾಂಡ್ ಜತೆ ಮಾತುಕತೆ ನಡೆಸಲಿದ್ದಾರೆ.

ಭಾನುವಾರ ರಾತ್ರಿ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್​ನಲ್ಲಿ ನಡೆದ ಕಾಂಗ್ರೆಸ್ ಶಾಶಕಾಂಗ ಪಕ್ಷದ ಸಭೆಯು ಮುಖ್ಯಮಂತ್ರಿ ಆಯ್ಕೆ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿತ್ತು. ಬಳಿಕ ಎಐಸಿಸಿ ವೀಕ್ಷಕರು ಶಾಸಕರ ವೈಯಕ್ತಿಕ ಮೌಖಿಕ ಅಭಿಪ್ರಾಯ ಸಂಗ್ರಹಿಸಿದ್ದು ಅದನ್ನು ಹೈಕಮಾಂಡ್​ಗೆ ಕಳಿಹಿಸಿಕೊಟ್ಟಿದ್ದರು.

ಎಐಸಿಸಿಯ ಮೂವರು ವೀಕ್ಷಕರಾದ ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ಸಭೆಯಲ್ಲಿ ಭಾಗವಹಿಸಿದ್ದರು. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸೋಣ. ಉಳಿದಿದ್ದನ್ನು ಹೈಕಮಾಂಡ್​ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

51 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

59 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 hour ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

12 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago