Advertisement
ಸುದ್ದಿಗಳು

ಮುಂದುವರಿದ ಸಿಎಂ ಫೈಟ್; ನನ್ನ ಬಳಿ 135 ಶಾಸಕರು ಇದ್ದಾರೆಂದ ಡಿಕೆ ಶಿವಕುಮಾರ್

Share

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದ ನಂತರದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಮುಂದುವರಿದಿದೆ. ಈ ಮಧ್ಯೆ, ಬಾಗಲೂರು ಬಳಿಯ ಫಾರ್ಮ್​ಹೌಸ್​ನಲ್ಲಿ ಡಿಕೆ ಶಿವಕುಮಾರ್ ಹಾಗೂ ಬೆಂಬಲಿಗರು ಸಭೆ ನಡೆಸಿದ್ದಾರೆ. ಅಲ್ಲಿ ಮಾತನಾಡಿದ ಶಿವಕುಮಾರ್, ಸಿಎಂ ಹುದ್ದೆಗೆ ಎಲ್ಲರೂ ಆಸೆ ಪಡಲಿ. ಆದರೆ, ನಾವು ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಅಂಗೀಕರಿಸಿದ್ದೇವೆ. ಯಾವ ಶಾಸಕರು ಏನು ಮಾಡಿದ್ದರೋ ನನಗೆ ಗೊತ್ತಿಲ್ಲ. ನನ್ನ ಬಳಿ 135 ಶಾಸಕರು ಇದ್ದಾರೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ.

ಬಳಿಕ ಅವರು ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದಾರೆ. ಈ ಬೆಳವಣಿಗೆಯ ಮಧ್ಯೆಯೇ, ಬೆಂಗಳೂರು ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಸಿ ಸಭೆ ನಡೆಸಲಾಗಿದೆ.

ಮತ್ತೊಂದೆಡೆ, ಸಿದ್ದರಾಮಯ್ಯ ಅವರು ಡಾ.ಯತೀಂದ್ರ, ಜಮೀರ್ ಅಹ್ಮದ್​ ಜತೆ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಅವರು ಹೈಕಮಾಂಡ್ ಜತೆ ಮಾತುಕತೆ ನಡೆಸಲಿದ್ದಾರೆ.

ಭಾನುವಾರ ರಾತ್ರಿ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್​ನಲ್ಲಿ ನಡೆದ ಕಾಂಗ್ರೆಸ್ ಶಾಶಕಾಂಗ ಪಕ್ಷದ ಸಭೆಯು ಮುಖ್ಯಮಂತ್ರಿ ಆಯ್ಕೆ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿತ್ತು. ಬಳಿಕ ಎಐಸಿಸಿ ವೀಕ್ಷಕರು ಶಾಸಕರ ವೈಯಕ್ತಿಕ ಮೌಖಿಕ ಅಭಿಪ್ರಾಯ ಸಂಗ್ರಹಿಸಿದ್ದು ಅದನ್ನು ಹೈಕಮಾಂಡ್​ಗೆ ಕಳಿಹಿಸಿಕೊಟ್ಟಿದ್ದರು.

ಎಐಸಿಸಿಯ ಮೂವರು ವೀಕ್ಷಕರಾದ ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ಸಭೆಯಲ್ಲಿ ಭಾಗವಹಿಸಿದ್ದರು. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸೋಣ. ಉಳಿದಿದ್ದನ್ನು ಹೈಕಮಾಂಡ್​ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

5 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

14 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

17 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

22 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago