ಸಿಎಂ ಆಯ್ಕೆ ಮತ್ತಷ್ಟು ಕಗ್ಗಂಟು | ಅಂತಿಮಗೊಳ್ಳದ ಸಿಎಂ ಹೆಸರು | ಸಿದ್ಧರಾಮಯ್ಯ ಪ್ರಮಾಣವಚನ ಮುಂದೂಡಿಕೆ | ಖರ್ಗೆ ಹೆಸರು ಮುಂದಿಟ್ಟ ಡಿಕೆಶಿ |

May 17, 2023
7:00 PM

ಮುಖ್ಯಮಂತ್ರಿ ಆಯ್ಕೆ ಇನ್ನಷ್ಟು ಕಗ್ಗಂಟಾಗಿದೆ. ಮಧ್ಯಾಹ್ನದ ವೇಳೆ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಹಾಗೂ ಡಿಸಿಎಂ ಆಗಿ ಡಿ ಕೆ ಶಿವಕುಮಾರ್‌ ಅಂತಿಮ ಆಯ್ಕೆ ಆಗಿದ್ದರೂ ಈ ಸಂಧಾನ ಮಾತುಕತೆಯೂ ವಿಫಲವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮುಂದಿಟ್ಟಿದ್ದಾರೆ.

ಇಂದು ರಾಹುಲ್‌ ನಿವಾಸಕ್ಕೆ ಸಿದ್ದರಾಮಯ್ಯ  ಆಗಮಿಸಿದ್ದರು. ಮಾತುಕತೆ ಯಶಸ್ವಿಯಾದ ಬೆನ್ನಲ್ಲೇ ಬೆಂಬಲಿಗರ ಜೊತೆ ಸಿದ್ದರಾಮಯ್ಯ ಕಾರಿನಲ್ಲಿ ರಾಹುಲ್‌ ನಿವಾಸದಿಂದ ತೆರಳಿದರು. ತೆರಳುವ ಸಂದರ್ಭದಲ್ಲಿ ಸಿದ್ದು ಬೆಂಬಲಿಗರು ವಿಕ್ಟರಿ ಚಿಹ್ನೆ ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಭೇಟಿಯ ಬಳಿಕ ರಾಹುಲ್‌ ನಿವಾಸಕ್ಕೆ ಡಿಕೆಶಿ ಆಗಮಿಸಿದರು. ಮಾತುಕತೆಯ ವೇಳೆ ಎಐಸಿಸಿಯ ಸಂಧಾನಕ್ಕೆ ಸೂತ್ರಕ್ಕೆ ಒಪ್ಪದ ಡಿಕೆ ನನಗೆ ಸಿಎಂ ಪಟ್ಟ ಕೊಡಲೇಬೇಕೆಂದು ಪಟ್ಟು ಹಿಡಿದರು.

ಚುನಾವಣೆಗೂ ಮೊದಲು ಸಿಎಂ ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆದ ಕಾರಣ ಅಧಿಕಾರಕ್ಕೆ ಏರಲು ಎಲ್ಲರ ಶ್ರಮವಿದೆ. ಕೊನೆಯ ಮೂರು ವರ್ಷ ನಾನು ಸಿಎಂ ಆಗಲು ಸಾಧ್ಯವಿಲ್ಲ. ಈಗಾಗಲೇ ಸಿದ್ದರಾಮಯ್ಯ ಒಂದು ಬಾರಿ ಮುಖ್ಯಮಂತ್ರಿ ಪಟ್ಟ ಏರಿದ್ದಾರೆ. ಈ ಬಾರಿ ನನಗೆ ಒಂದು ಅವಕಾಶ ನೀಡಿ. ಒಂದು ವೇಳೆ ನನಗೆ ಸಿಗದೇ ಇದ್ದರೆ ಪಕ್ಷದ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಪಟ್ಟ ನೀಡಿ. ಖರ್ಗೆ ಅವರಿಗೆ ಸಿಎಂ ಪಟ್ಟ ನೀಡಿದರೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಡಿಕೆಶಿ ರಾಹುಲ್‌ಗೆ ಮುಂದೆ ಹೊಸ ಸೂತ್ರವನ್ನು ಮುಂದಿಟ್ಟಿದ್ದಾರೆ. ಸಿದ್ದರಾಮಯ್ಯನವರಿಗೆ ಸಿಎಂ ಪಟ್ಟ ನೀಡಿದರೆ ನನಗೆ ಡಿಸಿಎಂ ಪಟ್ಟ ಬೇಡ. ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಬೇಡ. ನಾನು ಸರ್ಕಾರದ ಭಾಗವಾಗಿ ಇರಲ್ಲ. ಕೇವಲ ಶಾಸಕನಾಗಿಯೇ ಮುಂದುವರೆಯುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.

ಸುಮಾರು ಒಂದೂವರೆ ಗಂಟೆಗಳ ರಾಹುಲ್‌ ಸಂಧಾನ ಮಾಡಿದರೂ ಡಿಕೆಶಿ ಒಪ್ಪಲೇ ಇಲ್ಲ. ಒಂದು ವೇಳೆ ಮಾಡಿದರೆ ನನ್ನನ್ನು ಸಿಎಂ ಮಾಡಿ ಇಲ್ಲದೇ ಇದ್ದರೇ ಖರ್ಗೆ ಅವರನ್ನು ಮಾಡಿ ಎಂದು ನೇರವಾಗಿ ಖಂಡಾತುಂಡವಾಗಿ ಹೇಳಿದ್ದಾರೆ. ಆದರೆ ಈ ಸೂತ್ರಕ್ಕೆ ಸರಿಯಾದ ಸ್ಪಂದನೆ ಸಿಗದ ಕಾರಣ ರಾಹುಲ್‌ ಗಾಂಧಿ ಸಂಧಾನ ವಿಫಲವಾಗಿದೆ. ಸಂಧಾನ ವಿಫಲವಾದ ಬೆನ್ನಲ್ಲೇ ಡಿಕೆ ಶಿವಕುಮಾರ್‌ ನೇರವಾಗಿ ಖರ್ಗೆ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror