Advertisement
ಸುದ್ದಿಗಳು

ಸಿಎಂ ಆಯ್ಕೆ ಮತ್ತಷ್ಟು ಕಗ್ಗಂಟು | ಅಂತಿಮಗೊಳ್ಳದ ಸಿಎಂ ಹೆಸರು | ಸಿದ್ಧರಾಮಯ್ಯ ಪ್ರಮಾಣವಚನ ಮುಂದೂಡಿಕೆ | ಖರ್ಗೆ ಹೆಸರು ಮುಂದಿಟ್ಟ ಡಿಕೆಶಿ |

Share

ಮುಖ್ಯಮಂತ್ರಿ ಆಯ್ಕೆ ಇನ್ನಷ್ಟು ಕಗ್ಗಂಟಾಗಿದೆ. ಮಧ್ಯಾಹ್ನದ ವೇಳೆ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಹಾಗೂ ಡಿಸಿಎಂ ಆಗಿ ಡಿ ಕೆ ಶಿವಕುಮಾರ್‌ ಅಂತಿಮ ಆಯ್ಕೆ ಆಗಿದ್ದರೂ ಈ ಸಂಧಾನ ಮಾತುಕತೆಯೂ ವಿಫಲವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮುಂದಿಟ್ಟಿದ್ದಾರೆ.

ಇಂದು ರಾಹುಲ್‌ ನಿವಾಸಕ್ಕೆ ಸಿದ್ದರಾಮಯ್ಯ  ಆಗಮಿಸಿದ್ದರು. ಮಾತುಕತೆ ಯಶಸ್ವಿಯಾದ ಬೆನ್ನಲ್ಲೇ ಬೆಂಬಲಿಗರ ಜೊತೆ ಸಿದ್ದರಾಮಯ್ಯ ಕಾರಿನಲ್ಲಿ ರಾಹುಲ್‌ ನಿವಾಸದಿಂದ ತೆರಳಿದರು. ತೆರಳುವ ಸಂದರ್ಭದಲ್ಲಿ ಸಿದ್ದು ಬೆಂಬಲಿಗರು ವಿಕ್ಟರಿ ಚಿಹ್ನೆ ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಭೇಟಿಯ ಬಳಿಕ ರಾಹುಲ್‌ ನಿವಾಸಕ್ಕೆ ಡಿಕೆಶಿ ಆಗಮಿಸಿದರು. ಮಾತುಕತೆಯ ವೇಳೆ ಎಐಸಿಸಿಯ ಸಂಧಾನಕ್ಕೆ ಸೂತ್ರಕ್ಕೆ ಒಪ್ಪದ ಡಿಕೆ ನನಗೆ ಸಿಎಂ ಪಟ್ಟ ಕೊಡಲೇಬೇಕೆಂದು ಪಟ್ಟು ಹಿಡಿದರು.

ಚುನಾವಣೆಗೂ ಮೊದಲು ಸಿಎಂ ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆದ ಕಾರಣ ಅಧಿಕಾರಕ್ಕೆ ಏರಲು ಎಲ್ಲರ ಶ್ರಮವಿದೆ. ಕೊನೆಯ ಮೂರು ವರ್ಷ ನಾನು ಸಿಎಂ ಆಗಲು ಸಾಧ್ಯವಿಲ್ಲ. ಈಗಾಗಲೇ ಸಿದ್ದರಾಮಯ್ಯ ಒಂದು ಬಾರಿ ಮುಖ್ಯಮಂತ್ರಿ ಪಟ್ಟ ಏರಿದ್ದಾರೆ. ಈ ಬಾರಿ ನನಗೆ ಒಂದು ಅವಕಾಶ ನೀಡಿ. ಒಂದು ವೇಳೆ ನನಗೆ ಸಿಗದೇ ಇದ್ದರೆ ಪಕ್ಷದ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಪಟ್ಟ ನೀಡಿ. ಖರ್ಗೆ ಅವರಿಗೆ ಸಿಎಂ ಪಟ್ಟ ನೀಡಿದರೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಡಿಕೆಶಿ ರಾಹುಲ್‌ಗೆ ಮುಂದೆ ಹೊಸ ಸೂತ್ರವನ್ನು ಮುಂದಿಟ್ಟಿದ್ದಾರೆ. ಸಿದ್ದರಾಮಯ್ಯನವರಿಗೆ ಸಿಎಂ ಪಟ್ಟ ನೀಡಿದರೆ ನನಗೆ ಡಿಸಿಎಂ ಪಟ್ಟ ಬೇಡ. ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಬೇಡ. ನಾನು ಸರ್ಕಾರದ ಭಾಗವಾಗಿ ಇರಲ್ಲ. ಕೇವಲ ಶಾಸಕನಾಗಿಯೇ ಮುಂದುವರೆಯುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.

ಸುಮಾರು ಒಂದೂವರೆ ಗಂಟೆಗಳ ರಾಹುಲ್‌ ಸಂಧಾನ ಮಾಡಿದರೂ ಡಿಕೆಶಿ ಒಪ್ಪಲೇ ಇಲ್ಲ. ಒಂದು ವೇಳೆ ಮಾಡಿದರೆ ನನ್ನನ್ನು ಸಿಎಂ ಮಾಡಿ ಇಲ್ಲದೇ ಇದ್ದರೇ ಖರ್ಗೆ ಅವರನ್ನು ಮಾಡಿ ಎಂದು ನೇರವಾಗಿ ಖಂಡಾತುಂಡವಾಗಿ ಹೇಳಿದ್ದಾರೆ. ಆದರೆ ಈ ಸೂತ್ರಕ್ಕೆ ಸರಿಯಾದ ಸ್ಪಂದನೆ ಸಿಗದ ಕಾರಣ ರಾಹುಲ್‌ ಗಾಂಧಿ ಸಂಧಾನ ವಿಫಲವಾಗಿದೆ. ಸಂಧಾನ ವಿಫಲವಾದ ಬೆನ್ನಲ್ಲೇ ಡಿಕೆ ಶಿವಕುಮಾರ್‌ ನೇರವಾಗಿ ಖರ್ಗೆ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

8 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

9 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

11 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

11 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

22 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago